<p><strong>ಬೆಂಗಳೂರು:</strong> ರಾಜ್ಯದಲ್ಲೂ ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಶಿಲೀಂಧ್ರ ಸೋಂಕು (ಮ್ಯೂಕೋರ್ಮೈಕೋಸಿಸ್ ಅಥವಾ ಬ್ಲಾಕ್ ಫಂಗಸ್) ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ದೃಷ್ಟಿ ಕಳೆದುಕೊಂಡ ಪ್ರಕರಣಗಳು ಇಲ್ಲಿನ ಮಿಂಟೋ ಸೇರಿದಂತೆ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ವರದಿಯಾಗಿವೆ.</p>.<p>ರೋಗನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ಕೋವಿಡ್ನಿಂದ ಚೇತರಿಸಿಕೊಂಡ ಒಂದು ತಿಂಗಳ ಒಳಗಡೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಸೋಂಕು ಕಣ್ಣು, ಕಿವಿ ಮತ್ತು ಮಿದುಳಿಗೆ ವ್ಯಾಪಿಸಿಕೊಂಡು, ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ. ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಈ ಸಮಸ್ಯೆಗೆ ಒಳಪಡುವವರ ಸಂಖ್ಯೆ ಹೆಚ್ಚಾಗಿದೆ.</p>.<p>ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಎಂಟು ಪ್ರಕರಣಗಳನ್ನು ಮಿಂಟೊ ಕಣ್ಣಿನ ಆಸ್ಪತ್ರೆಯ ವೈದ್ಯರ ನೆರವಿನಿಂದ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅದರಲ್ಲಿ 6 ಮಂದಿ ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಬ್ಬರು ದೃಷ್ಟಿ ಕಳೆದುಕೊಂಡಿದ್ದಾರೆ. ಇದೇ ರೀತಿ, ನಾರಾಯಣ ನೇತ್ರಾಲಯ, ಪೀಪಲ್ ಟ್ರೀ, ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರಕರಣಗಳು ವರದಿಯಾಗಿವೆ.</p>.<p>‘ಕೋವಿಡ್ ಕಾಣಿಸಿಕೊಳ್ಳುವ ಪೂರ್ವದಲ್ಲಿ ಇದು ಅಷ್ಟಾಗಿ ಗಮನಕ್ಕೆ ಬರುತ್ತಿರಲಿಲ್ಲ. ಗಂಭೀರವಾಗಿ ಅಸ್ವಸ್ಥಗೊಂಡ ಕೊರೊನಾ ಸೋಂಕಿತರಿಗೆ ಸ್ಟೆರಾಯ್ಡ್ ಬಳಸುವುದರಿಂದ ದೇಹದಲ್ಲಿನ ಸಕ್ಕರೆ ಅಂಶ ಹೆಚ್ಚಳವಾಗುತ್ತದೆ. ಅದೇ ರೀತಿ, ರೋಗನಿರೋಧಕ ಶಕ್ತಿ ಕಡಿಮೆ ಇದ್ದಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.. ಇದನ್ನು ಬೇಗ ಪತ್ತೆ ಮಾಡದಿದ್ದಲ್ಲಿ ವ್ಯಕ್ತಿಯು ದೃಷ್ಟಿ ಕಳೆದುಕೊಳ್ಳುತ್ತಾನೆ. ಚಿಕಿತ್ಸೆ ನೀಡುವುದು ವಿಳಂಬವಾದಲ್ಲಿ ಮಿದುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡು, ವ್ಯಕ್ತಿ ಮೃತಪಡುವ ಸಾಧ್ಯತೆ ಇರುತ್ತದೆ’ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p><strong>ಗಂಭೀರ ಸಮಸ್ಯೆ:</strong> ‘ಮಧುಮೇಹ ಇದ್ದವರಿಗೆ ಈ ಮೊದಲು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಕೋವಿಡ್ನಿಂದ ಚೇತರಿಸಿಕೊಂಡ ಎರಡರಿಂದ ನಾಲ್ಕು ವಾರಗಳ ಅವಧಿಯಲ್ಲಿ ಈ ಸೋಂಕು ಪತ್ತೆಯಾಗುತ್ತಿದೆ’ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದರು.</p>.<p>‘ಈ ಸಮಸ್ಯೆಯನ್ನು ಕಡೆಗಣಿಸಿದಲ್ಲಿ ಸೋಂಕು, ಮಿದುಳು ಸೇರಿ ಜೀವಕ್ಕೆ ಅಪಾಯ ತಂದೊಡ್ಡಲಿದೆ. ಕಣ್ಣು ನೋವು, ಕೆಂಪಾಗುವುದು, ಕಿವಿಯ ಹಿಂದೆ ಊತ, ಕಣ್ಣು ಗುಡ್ಡೆ ಮುಂದೆ ಬರುವುದು, ಮೂಗು ಕಟ್ಟುವಿಕೆ ಸೇರಿದಂತೆ ವಿವಿಧ ಲಕ್ಷಣಗಳು ಈ ಸೋಂಕು ಇರುವವರಲ್ಲಿ ಕಾಣಿಸಿಕೊಳ್ಳುತ್ತದೆ’ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ ವಿವರಿಸಿದರು.</p>.<p><strong>ಚಿಕಿತ್ಸೆಗೆ ಬೇಕಾದ ಔಷಧ ದುಬಾರಿ</strong><br />‘ನಾಲ್ಕು ಪ್ರಕರಣಗಳಲ್ಲಿ ವ್ಯಕ್ತಿಯ ಕಣ್ಣನ್ನೇ ತೆಗೆಯುವ ಮೂಲಕ ಶಿಲೀಂಧ್ರ ಸೋಂಕಿನಿಂದ ಜೀವ ಉಳಿಸಲಾಯಿತು. ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಎಂಟು ಪ್ರಕರಣಗಳು ಬಂದಿದ್ದವು. ಈ ಸೋಂಕು ನಿವಾರಣೆಗೆ ಒದಗಿಸುವ ಔಷಧ ದುಬಾರಿಯಾಗಿದ್ದು’ ಎಂದು ಪೀಪಲ್ ಟ್ರೀ ಆಸ್ಪತ್ರೆಯ ಇಎನ್ಟಿ ಶಸ್ತ್ರಚಿಕಿತ್ಸಕ ಡಾ. ರವಿ ಸಚ್ಚಿದಾನಂದ ತಿಳಿಸಿದರು.</p>.<p>‘ಲಿಪೋಸೋಮಲ್ ಆಂಫೊಟೆರಿಸಿನ್ ಬಿ ಎಂಬ ಔಷಧವನ್ನು ಸೋಂಕು ನಿವಾರಣೆಗೆ ನೀಡಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲೂ ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಶಿಲೀಂಧ್ರ ಸೋಂಕು (ಮ್ಯೂಕೋರ್ಮೈಕೋಸಿಸ್ ಅಥವಾ ಬ್ಲಾಕ್ ಫಂಗಸ್) ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ದೃಷ್ಟಿ ಕಳೆದುಕೊಂಡ ಪ್ರಕರಣಗಳು ಇಲ್ಲಿನ ಮಿಂಟೋ ಸೇರಿದಂತೆ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ವರದಿಯಾಗಿವೆ.</p>.<p>ರೋಗನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ಕೋವಿಡ್ನಿಂದ ಚೇತರಿಸಿಕೊಂಡ ಒಂದು ತಿಂಗಳ ಒಳಗಡೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಸೋಂಕು ಕಣ್ಣು, ಕಿವಿ ಮತ್ತು ಮಿದುಳಿಗೆ ವ್ಯಾಪಿಸಿಕೊಂಡು, ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ. ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಈ ಸಮಸ್ಯೆಗೆ ಒಳಪಡುವವರ ಸಂಖ್ಯೆ ಹೆಚ್ಚಾಗಿದೆ.</p>.<p>ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಎಂಟು ಪ್ರಕರಣಗಳನ್ನು ಮಿಂಟೊ ಕಣ್ಣಿನ ಆಸ್ಪತ್ರೆಯ ವೈದ್ಯರ ನೆರವಿನಿಂದ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅದರಲ್ಲಿ 6 ಮಂದಿ ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಬ್ಬರು ದೃಷ್ಟಿ ಕಳೆದುಕೊಂಡಿದ್ದಾರೆ. ಇದೇ ರೀತಿ, ನಾರಾಯಣ ನೇತ್ರಾಲಯ, ಪೀಪಲ್ ಟ್ರೀ, ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರಕರಣಗಳು ವರದಿಯಾಗಿವೆ.</p>.<p>‘ಕೋವಿಡ್ ಕಾಣಿಸಿಕೊಳ್ಳುವ ಪೂರ್ವದಲ್ಲಿ ಇದು ಅಷ್ಟಾಗಿ ಗಮನಕ್ಕೆ ಬರುತ್ತಿರಲಿಲ್ಲ. ಗಂಭೀರವಾಗಿ ಅಸ್ವಸ್ಥಗೊಂಡ ಕೊರೊನಾ ಸೋಂಕಿತರಿಗೆ ಸ್ಟೆರಾಯ್ಡ್ ಬಳಸುವುದರಿಂದ ದೇಹದಲ್ಲಿನ ಸಕ್ಕರೆ ಅಂಶ ಹೆಚ್ಚಳವಾಗುತ್ತದೆ. ಅದೇ ರೀತಿ, ರೋಗನಿರೋಧಕ ಶಕ್ತಿ ಕಡಿಮೆ ಇದ್ದಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.. ಇದನ್ನು ಬೇಗ ಪತ್ತೆ ಮಾಡದಿದ್ದಲ್ಲಿ ವ್ಯಕ್ತಿಯು ದೃಷ್ಟಿ ಕಳೆದುಕೊಳ್ಳುತ್ತಾನೆ. ಚಿಕಿತ್ಸೆ ನೀಡುವುದು ವಿಳಂಬವಾದಲ್ಲಿ ಮಿದುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡು, ವ್ಯಕ್ತಿ ಮೃತಪಡುವ ಸಾಧ್ಯತೆ ಇರುತ್ತದೆ’ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p><strong>ಗಂಭೀರ ಸಮಸ್ಯೆ:</strong> ‘ಮಧುಮೇಹ ಇದ್ದವರಿಗೆ ಈ ಮೊದಲು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಕೋವಿಡ್ನಿಂದ ಚೇತರಿಸಿಕೊಂಡ ಎರಡರಿಂದ ನಾಲ್ಕು ವಾರಗಳ ಅವಧಿಯಲ್ಲಿ ಈ ಸೋಂಕು ಪತ್ತೆಯಾಗುತ್ತಿದೆ’ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದರು.</p>.<p>‘ಈ ಸಮಸ್ಯೆಯನ್ನು ಕಡೆಗಣಿಸಿದಲ್ಲಿ ಸೋಂಕು, ಮಿದುಳು ಸೇರಿ ಜೀವಕ್ಕೆ ಅಪಾಯ ತಂದೊಡ್ಡಲಿದೆ. ಕಣ್ಣು ನೋವು, ಕೆಂಪಾಗುವುದು, ಕಿವಿಯ ಹಿಂದೆ ಊತ, ಕಣ್ಣು ಗುಡ್ಡೆ ಮುಂದೆ ಬರುವುದು, ಮೂಗು ಕಟ್ಟುವಿಕೆ ಸೇರಿದಂತೆ ವಿವಿಧ ಲಕ್ಷಣಗಳು ಈ ಸೋಂಕು ಇರುವವರಲ್ಲಿ ಕಾಣಿಸಿಕೊಳ್ಳುತ್ತದೆ’ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ ವಿವರಿಸಿದರು.</p>.<p><strong>ಚಿಕಿತ್ಸೆಗೆ ಬೇಕಾದ ಔಷಧ ದುಬಾರಿ</strong><br />‘ನಾಲ್ಕು ಪ್ರಕರಣಗಳಲ್ಲಿ ವ್ಯಕ್ತಿಯ ಕಣ್ಣನ್ನೇ ತೆಗೆಯುವ ಮೂಲಕ ಶಿಲೀಂಧ್ರ ಸೋಂಕಿನಿಂದ ಜೀವ ಉಳಿಸಲಾಯಿತು. ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಎಂಟು ಪ್ರಕರಣಗಳು ಬಂದಿದ್ದವು. ಈ ಸೋಂಕು ನಿವಾರಣೆಗೆ ಒದಗಿಸುವ ಔಷಧ ದುಬಾರಿಯಾಗಿದ್ದು’ ಎಂದು ಪೀಪಲ್ ಟ್ರೀ ಆಸ್ಪತ್ರೆಯ ಇಎನ್ಟಿ ಶಸ್ತ್ರಚಿಕಿತ್ಸಕ ಡಾ. ರವಿ ಸಚ್ಚಿದಾನಂದ ತಿಳಿಸಿದರು.</p>.<p>‘ಲಿಪೋಸೋಮಲ್ ಆಂಫೊಟೆರಿಸಿನ್ ಬಿ ಎಂಬ ಔಷಧವನ್ನು ಸೋಂಕು ನಿವಾರಣೆಗೆ ನೀಡಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>