<p><strong>ಬೆಂಗಳೂರು:</strong> ‘ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರಂತೆ ನನಗೂ ಆಕಾಂಕ್ಷೆಯಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>‘ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅದು ನಮ್ಮ ಹೈಕಮಾಂಡ್ಗೆ ಬಿಟ್ಟಿದ್ದಾಗಿದೆ. ನಾನು ಈವರೆಗೂ ಆಶಾವಾದಿಯಾಗಿಯೇ ಬದುಕಿದ್ದೇನೆ. ಅದೇನು ಹೊಸದಾಗಿ ಆಗಬೇಕು ಎಂದೇನೂ ಇಲ್ಲ’ ಎಂದರು.</p>.<p>‘ಎಲ್ಲರಿಗೂ ಜೀವನದಲ್ಲಿ ಏನೇನೊ ಆಗಬೇಕು ಎಂದಿರುತ್ತದೆ. ಮನುಷ್ಯನಿಗೆ ಆಕಾಂಕ್ಷೆ ಎನ್ನುವುದು ಇರಲೇಬೇಕು. ಅದಿಲ್ಲದಿದ್ದರೆ ಮನುಷ್ಯ ಎನಿಸಿಕೊಳ್ಳುವುದಿಲ್ಲ’ ಎಂದರು.</p>.<p>‘ಅದಕ್ಕೆ ವಾತಾವರಣ ಪೂರಕ ಆಗಿದೆಯೇ ಇಲ್ಲವೇ ಎಂದು ನೀವೇ (ಮಾಧ್ಯಮ) ಗಮನಿಸುತ್ತಿದ್ದೀರಲ್ಲ. ಯಾರಿಗೆ ವಾತಾವರಣ ಪೂರಕವಾಗಿದೆ, ಯಾರಿಗೆ ಇಲ್ಲ ಎಂದು ನೀವು ಸೂಕ್ಷ್ಮವಾಗಿ ಗಮನಿಸುತ್ತಿದ್ದೀರಲ್ಲ’ ಎಂದೂ ಹೇಳಿದರು.</p>.<p>ಅಹಿತಕರ ಘಟನೆ ನಡೆದಿಲ್ಲ: ‘ಹೊಸ ವರ್ಷಾಚರಣೆಯನ್ನು ಜನ ಈ ಬಾರಿ ಜವಾಬ್ದಾರಿಯಿಂದ ಆಚರಿಸಿದ್ದಾರೆ. ಭದ್ರತೆಗೆ 20 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಎಲ್ಲೂ ಅಹಿತಕರ ಘಟನೆ ಆಗಿಲ್ಲ. ಸಂಚಾರ ದಟ್ಟಣೆಯೂ ಆಗಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರಂತೆ ನನಗೂ ಆಕಾಂಕ್ಷೆಯಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>‘ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅದು ನಮ್ಮ ಹೈಕಮಾಂಡ್ಗೆ ಬಿಟ್ಟಿದ್ದಾಗಿದೆ. ನಾನು ಈವರೆಗೂ ಆಶಾವಾದಿಯಾಗಿಯೇ ಬದುಕಿದ್ದೇನೆ. ಅದೇನು ಹೊಸದಾಗಿ ಆಗಬೇಕು ಎಂದೇನೂ ಇಲ್ಲ’ ಎಂದರು.</p>.<p>‘ಎಲ್ಲರಿಗೂ ಜೀವನದಲ್ಲಿ ಏನೇನೊ ಆಗಬೇಕು ಎಂದಿರುತ್ತದೆ. ಮನುಷ್ಯನಿಗೆ ಆಕಾಂಕ್ಷೆ ಎನ್ನುವುದು ಇರಲೇಬೇಕು. ಅದಿಲ್ಲದಿದ್ದರೆ ಮನುಷ್ಯ ಎನಿಸಿಕೊಳ್ಳುವುದಿಲ್ಲ’ ಎಂದರು.</p>.<p>‘ಅದಕ್ಕೆ ವಾತಾವರಣ ಪೂರಕ ಆಗಿದೆಯೇ ಇಲ್ಲವೇ ಎಂದು ನೀವೇ (ಮಾಧ್ಯಮ) ಗಮನಿಸುತ್ತಿದ್ದೀರಲ್ಲ. ಯಾರಿಗೆ ವಾತಾವರಣ ಪೂರಕವಾಗಿದೆ, ಯಾರಿಗೆ ಇಲ್ಲ ಎಂದು ನೀವು ಸೂಕ್ಷ್ಮವಾಗಿ ಗಮನಿಸುತ್ತಿದ್ದೀರಲ್ಲ’ ಎಂದೂ ಹೇಳಿದರು.</p>.<p>ಅಹಿತಕರ ಘಟನೆ ನಡೆದಿಲ್ಲ: ‘ಹೊಸ ವರ್ಷಾಚರಣೆಯನ್ನು ಜನ ಈ ಬಾರಿ ಜವಾಬ್ದಾರಿಯಿಂದ ಆಚರಿಸಿದ್ದಾರೆ. ಭದ್ರತೆಗೆ 20 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಎಲ್ಲೂ ಅಹಿತಕರ ಘಟನೆ ಆಗಿಲ್ಲ. ಸಂಚಾರ ದಟ್ಟಣೆಯೂ ಆಗಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>