<p><strong>ಮೈಸೂರು:</strong> ‘ನಾನು ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದೇನೆಯೇ ಎಂಬುದನ್ನು ಆ ಸಂದರ್ಭ ಬಂದಾಗ ಹೇಳುತ್ತೇನೆ’ ಎಂದು ಶಾಸಕ, ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಹೇಳಿದರು.</p>.<p>ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಕಾಂಗ್ರೆಸ್ನಲ್ಲಿ ಕಾವು ಪಡೆದಿರುವ ಸಮಯದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿ ನೀವು ಇದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಆ ಸಂದರ್ಭ ಬರಲಿ, ನೋಡೋಣ’ ಎಂದು ಮಾರ್ಮಿಕವಾಗಿ ಉತ್ತರಿಸಿದರು.</p>.<p><strong>ಚರ್ಚೆ ಇಲ್ಲಿಗೆ ಸಾಕು:</strong> ‘ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಅದರಲ್ಲಿ ನಾವೆಲ್ಲರೂ ಮತ್ತೆ ಗೆದ್ದು ಬರಬೇಕು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಈಗಲೇ ನಿರ್ಧರಿಸುವುದು ಅಪ್ರಸ್ತುತ’ ಎಂದರು.</p>.<p>‘ಒಂದಷ್ಟು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ಈಗ ದೊಡ್ಡ ಚರ್ಚೆಯಾಗಿ ಬೆಳೆದಿದೆ. ಈ ಚರ್ಚೆ ಇಲ್ಲಿಗೆ ಸಾಕು ಎಂದು ಪಕ್ಷದಲ್ಲಿರುವ ನನ್ನ ಸ್ನೇಹಿತರು ಮತ್ತು ಎಲ್ಲ ಮುಖಂಡರಿಗೆ ಮನವಿ ಮಾಡುತ್ತೇನೆ. ಈ ವಿಚಾರವನ್ನು ಇನ್ನಷ್ಟು ಬೆಳೆಸುವ ಅಗತ್ಯವಿಲ್ಲ’ ಎಂದು ತಿಳಿಸಿದರು.</p>.<p><a href="https://www.prajavani.net/district/bengaluru-city/bengaluru-suburban-rail-work-will-start-within-3-months-foundation-stone-by-pm-narendra-modi-841890.html" itemprop="url">ಬೆಂಗಳೂರು ಉಪನಗರ ರೈಲು:3 ತಿಂಗಳಲ್ಲಿ ಕಾಮಗಾರಿ ಆರಂಭ, ಪಿಎಂ ಶಂಕುಸ್ಥಾಪನೆ </a></p>.<p>‘ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಎಲ್ಲ ಶಾಸಕರ ಅಭಿಪ್ರಾಯ ಕೇಳಲಾಗುತ್ತದೆ. ಮುಖ್ಯಮಂತ್ರಿ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್ಗೆ ಬಿಡಲಾಗಿದೆ ಎಂಬ ನಿರ್ಣಯವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಗೆದುಕೊಳ್ಳುವುದು ವಾಡಿಕೆ. ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮುಖ್ಯಮಂತ್ರಿ ಆಗುವ ಸಮರ್ಥರು ಯಾರಿದ್ದಾರೆ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.</p>.<p><a href="https://www.prajavani.net/district/tumakuru/mother-and-two-daughters-drown-in-open-well-during-children-try-to-pluck-guava-fruit-841884.html" itemprop="url">ಸೀಬೆಹಣ್ಣು ಕೀಳುವಾಗ ಬಾವಿಗೆ ಬಿದ್ದ ಮಕ್ಕಳು, ರಕ್ಷಿಸಲು ಹೋದ ತಾಯಿಯೂ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾನು ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದೇನೆಯೇ ಎಂಬುದನ್ನು ಆ ಸಂದರ್ಭ ಬಂದಾಗ ಹೇಳುತ್ತೇನೆ’ ಎಂದು ಶಾಸಕ, ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಹೇಳಿದರು.</p>.<p>ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಕಾಂಗ್ರೆಸ್ನಲ್ಲಿ ಕಾವು ಪಡೆದಿರುವ ಸಮಯದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿ ನೀವು ಇದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಆ ಸಂದರ್ಭ ಬರಲಿ, ನೋಡೋಣ’ ಎಂದು ಮಾರ್ಮಿಕವಾಗಿ ಉತ್ತರಿಸಿದರು.</p>.<p><strong>ಚರ್ಚೆ ಇಲ್ಲಿಗೆ ಸಾಕು:</strong> ‘ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಅದರಲ್ಲಿ ನಾವೆಲ್ಲರೂ ಮತ್ತೆ ಗೆದ್ದು ಬರಬೇಕು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಈಗಲೇ ನಿರ್ಧರಿಸುವುದು ಅಪ್ರಸ್ತುತ’ ಎಂದರು.</p>.<p>‘ಒಂದಷ್ಟು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ಈಗ ದೊಡ್ಡ ಚರ್ಚೆಯಾಗಿ ಬೆಳೆದಿದೆ. ಈ ಚರ್ಚೆ ಇಲ್ಲಿಗೆ ಸಾಕು ಎಂದು ಪಕ್ಷದಲ್ಲಿರುವ ನನ್ನ ಸ್ನೇಹಿತರು ಮತ್ತು ಎಲ್ಲ ಮುಖಂಡರಿಗೆ ಮನವಿ ಮಾಡುತ್ತೇನೆ. ಈ ವಿಚಾರವನ್ನು ಇನ್ನಷ್ಟು ಬೆಳೆಸುವ ಅಗತ್ಯವಿಲ್ಲ’ ಎಂದು ತಿಳಿಸಿದರು.</p>.<p><a href="https://www.prajavani.net/district/bengaluru-city/bengaluru-suburban-rail-work-will-start-within-3-months-foundation-stone-by-pm-narendra-modi-841890.html" itemprop="url">ಬೆಂಗಳೂರು ಉಪನಗರ ರೈಲು:3 ತಿಂಗಳಲ್ಲಿ ಕಾಮಗಾರಿ ಆರಂಭ, ಪಿಎಂ ಶಂಕುಸ್ಥಾಪನೆ </a></p>.<p>‘ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಎಲ್ಲ ಶಾಸಕರ ಅಭಿಪ್ರಾಯ ಕೇಳಲಾಗುತ್ತದೆ. ಮುಖ್ಯಮಂತ್ರಿ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್ಗೆ ಬಿಡಲಾಗಿದೆ ಎಂಬ ನಿರ್ಣಯವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಗೆದುಕೊಳ್ಳುವುದು ವಾಡಿಕೆ. ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮುಖ್ಯಮಂತ್ರಿ ಆಗುವ ಸಮರ್ಥರು ಯಾರಿದ್ದಾರೆ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.</p>.<p><a href="https://www.prajavani.net/district/tumakuru/mother-and-two-daughters-drown-in-open-well-during-children-try-to-pluck-guava-fruit-841884.html" itemprop="url">ಸೀಬೆಹಣ್ಣು ಕೀಳುವಾಗ ಬಾವಿಗೆ ಬಿದ್ದ ಮಕ್ಕಳು, ರಕ್ಷಿಸಲು ಹೋದ ತಾಯಿಯೂ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>