<p><strong>ಬೆಂಗಳೂರು</strong>: ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಜೆಡಿಎಸ್ ‘ಕೋರ್ ಕಮಿಟಿ’ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡ ಅವರನ್ನೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆಮಾಡಲು ಪಕ್ಷದ ವರಿಷ್ಠರು ಯೋಚಿಸಿದ್ದಾರೆ.</p>.<p>ಕೇಂದ್ರ ಸಚಿವರಾಗಿರುವ ಕಾರಣದಿಂದ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ. ಇದರಿಂದಾಗಿ ಅವರು ನಿರ್ವಹಿಸುತ್ತಿದ್ದ ಶಾಸಕಾಂಗ ಪಕ್ಷದ ನಾಯಕನ ಸ್ಥಾನವೂ ತೆರವಾಗಲಿದೆ. ಜಿ.ಟಿ. ದೇವೇಗೌಡರನ್ನೇ ಆ ಸ್ಥಾನಕ್ಕೆ ಆಯ್ಕೆ ಮಾಡುವುದು ಸೂಕ್ತ ಎಂಬ ಚರ್ಚೆ ಪಕ್ಷದ ಪ್ರಮುಖ ನಾಯಕರಲ್ಲಿ ನಡೆದಿದೆ. ಬಹುತೇಕರು ಈ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಕುಮಾರಸ್ವಾಮಿ ಅವರು ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗುವರು. ಆ ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಇತರ ನಾಯಕರ ಜತೆ ಚರ್ಚಿಸುವರು. ಜಿ.ಟಿ. ದೇವೇಗೌಡರ ಆಯ್ಕೆಗೆ ಹೆಚ್ಚಿನ ಮಂದಿ ಒಲವು ಹೊಂದಿದ್ದಾರೆ’ ಎಂದು ಜೆಡಿಎಸ್ ಪ್ರಮುಖರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಧ್ಯಕ್ಷರ ಆಯ್ಕೆ ತುಸು ವಿಳಂಬ: ಕೆಲಸಗಳ ಒತ್ತಡ ಹೆಚ್ಚಿರುವ ಕಾರಣದಿಂದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತೊರೆಯುವುದಕ್ಕೂ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿರುವ ಪಕ್ಷದ ಮುಖಂಡರ ಜತೆ ಸೋಮವಾರ ರಾತ್ರಿ ನಡೆದ ಚರ್ಚೆ ವೇಳೆ ಪ್ರಸ್ತಾಪಿಸಿದ್ದಾರೆ. ಆದರೆ, ರಾಜ್ಯ ಘಟಕದ ನೂತನ ಅಧ್ಯಕ್ಷರ ಆಯ್ಕೆ ಕೆಲವು ದಿನಗಳ ಕಾಲ ವಿಳಂಬ ಆಗಬಹುದು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಜೆಡಿಎಸ್ ‘ಕೋರ್ ಕಮಿಟಿ’ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡ ಅವರನ್ನೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆಮಾಡಲು ಪಕ್ಷದ ವರಿಷ್ಠರು ಯೋಚಿಸಿದ್ದಾರೆ.</p>.<p>ಕೇಂದ್ರ ಸಚಿವರಾಗಿರುವ ಕಾರಣದಿಂದ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ. ಇದರಿಂದಾಗಿ ಅವರು ನಿರ್ವಹಿಸುತ್ತಿದ್ದ ಶಾಸಕಾಂಗ ಪಕ್ಷದ ನಾಯಕನ ಸ್ಥಾನವೂ ತೆರವಾಗಲಿದೆ. ಜಿ.ಟಿ. ದೇವೇಗೌಡರನ್ನೇ ಆ ಸ್ಥಾನಕ್ಕೆ ಆಯ್ಕೆ ಮಾಡುವುದು ಸೂಕ್ತ ಎಂಬ ಚರ್ಚೆ ಪಕ್ಷದ ಪ್ರಮುಖ ನಾಯಕರಲ್ಲಿ ನಡೆದಿದೆ. ಬಹುತೇಕರು ಈ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಕುಮಾರಸ್ವಾಮಿ ಅವರು ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗುವರು. ಆ ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಇತರ ನಾಯಕರ ಜತೆ ಚರ್ಚಿಸುವರು. ಜಿ.ಟಿ. ದೇವೇಗೌಡರ ಆಯ್ಕೆಗೆ ಹೆಚ್ಚಿನ ಮಂದಿ ಒಲವು ಹೊಂದಿದ್ದಾರೆ’ ಎಂದು ಜೆಡಿಎಸ್ ಪ್ರಮುಖರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಧ್ಯಕ್ಷರ ಆಯ್ಕೆ ತುಸು ವಿಳಂಬ: ಕೆಲಸಗಳ ಒತ್ತಡ ಹೆಚ್ಚಿರುವ ಕಾರಣದಿಂದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತೊರೆಯುವುದಕ್ಕೂ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿರುವ ಪಕ್ಷದ ಮುಖಂಡರ ಜತೆ ಸೋಮವಾರ ರಾತ್ರಿ ನಡೆದ ಚರ್ಚೆ ವೇಳೆ ಪ್ರಸ್ತಾಪಿಸಿದ್ದಾರೆ. ಆದರೆ, ರಾಜ್ಯ ಘಟಕದ ನೂತನ ಅಧ್ಯಕ್ಷರ ಆಯ್ಕೆ ಕೆಲವು ದಿನಗಳ ಕಾಲ ವಿಳಂಬ ಆಗಬಹುದು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>