<p><strong>ಬೆಂಗಳೂರು:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು, ಸಭೆಯಲ್ಲಿ ವಿಶ್ವದ ವಿವಿಧ ನಾಯಕರು ಪಾಲ್ಗೊಂಡಿದ್ದಾರೆ. ಜಿ20 ಸಮಾವೇಶಕ್ಕೆ ಗಣ್ಯರು ಆಗಮಿಸುವ ವೇಳೆ ದೆಹಲಿಯ ಕೊಳಗೇರಿಗಳು, ಬೀದಿನಾಯಿಗಳು ಕಾಣಬಾರದೆಂದು ರಸ್ತೆ ಬದಿಗಳಲ್ಲಿ ಹಸಿರು ಹೊದಿಕೆಯಿಂದ ಮುಚ್ಚಲಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದಿರುವ ಕಾಂಗ್ರೆಸ್, ಜಿ20 ಸಮಾವೇಶಕ್ಕೆ ಬರುತ್ತಿರುವ ವಿದೇಶಿ ಗಣ್ಯರಿಗೆ ಮೋದಿ ಅವರ ಅಭಿವೃದ್ಧಿಯ ಅಚ್ಚೆ ದಿನಗಳನ್ನು ಮುಚ್ಚಿಡಲು ಪರದೆ ಹಾಕಲಾಗಿದೆ ಎಂದು ಟೀಕಿಸಿದೆ.</p><p>ಬಡವರನ್ನು, ಬಡತನವನ್ನು ನೋಡದಿದ್ದರೆ ಆಯ್ತು ಬಡತನ ನಿರ್ಮೂಲನೆ ಮಾಡಿದಂತಾಗುತ್ತದೆ ಎಂಬುದು ‘ಬಡ ತಾಯಿಯ ಮಗನ’ (ನರೇಂದ್ರ ಮೋದಿ) ನಂಬಿಕೆಯಾಗಿದೆ. ದೆಹಲಿಯ ಕೊಳಗೇರಿಗಳಿಗೆ ಪರದೆ ಹಾಕಿರುವ ಕೇಂದ್ರ ಸರ್ಕಾರ ಜಿ20 ಸಮಾವೇಶಕ್ಕಾಗಿ, ದೆಹಲಿಯ ಸುಂದರೀಕರಣಕ್ಕೆ ಬರೋಬ್ಬರಿ ₹4,200 ಕೋಟಿ ಖರ್ಚು ಮಾಡಿದೆ ಎಂದು ವಾಗ್ದಾಳಿ ನಡೆಸಿದೆ.</p>.<p>ಜಿ20 ಸಮಾವೇಶಕ್ಕಾಗಿ ಬಜೆಟ್ನಲ್ಲಿ ಮೀಸಲಿಟ್ಟ ಮೊತ್ತ ₹990 ಕೋಟಿ. ಅತಿಥಿ ಸತ್ಕಾರಕ್ಕಾಗಿ ₹2,700 ಕೋಟಿ ಖರ್ಚು ಮಾಡಿದೆ. ಈ ಎಲ್ಲಾ ಖರ್ಚಿನಲ್ಲಿ ಬಡವರನ್ನು ಮುಚ್ಚಿಡುವ ಬದಲು ಬಡತನವನ್ನೇ ನಿರ್ಮೂಲನೆ ಮಾಡಬಹುದಿತ್ತಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು, ಸಭೆಯಲ್ಲಿ ವಿಶ್ವದ ವಿವಿಧ ನಾಯಕರು ಪಾಲ್ಗೊಂಡಿದ್ದಾರೆ. ಜಿ20 ಸಮಾವೇಶಕ್ಕೆ ಗಣ್ಯರು ಆಗಮಿಸುವ ವೇಳೆ ದೆಹಲಿಯ ಕೊಳಗೇರಿಗಳು, ಬೀದಿನಾಯಿಗಳು ಕಾಣಬಾರದೆಂದು ರಸ್ತೆ ಬದಿಗಳಲ್ಲಿ ಹಸಿರು ಹೊದಿಕೆಯಿಂದ ಮುಚ್ಚಲಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದಿರುವ ಕಾಂಗ್ರೆಸ್, ಜಿ20 ಸಮಾವೇಶಕ್ಕೆ ಬರುತ್ತಿರುವ ವಿದೇಶಿ ಗಣ್ಯರಿಗೆ ಮೋದಿ ಅವರ ಅಭಿವೃದ್ಧಿಯ ಅಚ್ಚೆ ದಿನಗಳನ್ನು ಮುಚ್ಚಿಡಲು ಪರದೆ ಹಾಕಲಾಗಿದೆ ಎಂದು ಟೀಕಿಸಿದೆ.</p><p>ಬಡವರನ್ನು, ಬಡತನವನ್ನು ನೋಡದಿದ್ದರೆ ಆಯ್ತು ಬಡತನ ನಿರ್ಮೂಲನೆ ಮಾಡಿದಂತಾಗುತ್ತದೆ ಎಂಬುದು ‘ಬಡ ತಾಯಿಯ ಮಗನ’ (ನರೇಂದ್ರ ಮೋದಿ) ನಂಬಿಕೆಯಾಗಿದೆ. ದೆಹಲಿಯ ಕೊಳಗೇರಿಗಳಿಗೆ ಪರದೆ ಹಾಕಿರುವ ಕೇಂದ್ರ ಸರ್ಕಾರ ಜಿ20 ಸಮಾವೇಶಕ್ಕಾಗಿ, ದೆಹಲಿಯ ಸುಂದರೀಕರಣಕ್ಕೆ ಬರೋಬ್ಬರಿ ₹4,200 ಕೋಟಿ ಖರ್ಚು ಮಾಡಿದೆ ಎಂದು ವಾಗ್ದಾಳಿ ನಡೆಸಿದೆ.</p>.<p>ಜಿ20 ಸಮಾವೇಶಕ್ಕಾಗಿ ಬಜೆಟ್ನಲ್ಲಿ ಮೀಸಲಿಟ್ಟ ಮೊತ್ತ ₹990 ಕೋಟಿ. ಅತಿಥಿ ಸತ್ಕಾರಕ್ಕಾಗಿ ₹2,700 ಕೋಟಿ ಖರ್ಚು ಮಾಡಿದೆ. ಈ ಎಲ್ಲಾ ಖರ್ಚಿನಲ್ಲಿ ಬಡವರನ್ನು ಮುಚ್ಚಿಡುವ ಬದಲು ಬಡತನವನ್ನೇ ನಿರ್ಮೂಲನೆ ಮಾಡಬಹುದಿತ್ತಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>