<p><strong>ಬೆಂಗಳೂರು: </strong>ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಪತ್ನಿಗಾಗಿ ಮರವೇರಿ ಮಾವಿನ ಕಾಯಿ ಕಿತ್ತು ಕೊಟ್ಟಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಜನಾರ್ದನ ರೆಡ್ಡಿ ಖಾಸಗಿ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶದಲ್ಲಿರುವ ಅವರಮಾವನ ಮನೆಗೆ ತೆರಳಿದ್ದರು. ಈ ವೇಳೆ ಪತ್ನಿ ಅರುಣಾ ಅವರೊಂದಿಗೆ ತೋಟಕ್ಕೆ ಭೇಟಿ ನೀಡಿ, ಮಾವಿನ ಕಾಯಿಯನ್ನು ಕಿತ್ತು ಕೊಟ್ಟಿದ್ದಾರೆ. ಈ ಕುರಿತು ವಿಡಿಯೊವೊಂದನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p><strong>ಪೋಸ್ಟ್ನಲ್ಲಿ ಏನಿದೆ?</strong><br />‘ನೆನಪಿಗೆ ಬಂದ ಆ ಬಾಲ್ಯದ ದಿನಗಳು ...<br />ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ.<br />ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.</p>.<p>ತೋಟದಲ್ಲಿ ಇಪ್ಪತ್ತು ಏಳು ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತುನನ್ನ ಶ್ರೀಮತಿಗೆ ನೀಡಿದೆ.</p>.<p>ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು’ಎಂದುಗಾಲಿ ಜನಾರ್ದನ ರೆಡ್ಡಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಪತ್ನಿಗಾಗಿ ಮರವೇರಿ ಮಾವಿನ ಕಾಯಿ ಕಿತ್ತು ಕೊಟ್ಟಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಜನಾರ್ದನ ರೆಡ್ಡಿ ಖಾಸಗಿ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶದಲ್ಲಿರುವ ಅವರಮಾವನ ಮನೆಗೆ ತೆರಳಿದ್ದರು. ಈ ವೇಳೆ ಪತ್ನಿ ಅರುಣಾ ಅವರೊಂದಿಗೆ ತೋಟಕ್ಕೆ ಭೇಟಿ ನೀಡಿ, ಮಾವಿನ ಕಾಯಿಯನ್ನು ಕಿತ್ತು ಕೊಟ್ಟಿದ್ದಾರೆ. ಈ ಕುರಿತು ವಿಡಿಯೊವೊಂದನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p><strong>ಪೋಸ್ಟ್ನಲ್ಲಿ ಏನಿದೆ?</strong><br />‘ನೆನಪಿಗೆ ಬಂದ ಆ ಬಾಲ್ಯದ ದಿನಗಳು ...<br />ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ.<br />ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.</p>.<p>ತೋಟದಲ್ಲಿ ಇಪ್ಪತ್ತು ಏಳು ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತುನನ್ನ ಶ್ರೀಮತಿಗೆ ನೀಡಿದೆ.</p>.<p>ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು’ಎಂದುಗಾಲಿ ಜನಾರ್ದನ ರೆಡ್ಡಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>