<p><strong>ಬೆಂಗಳೂರು</strong>: 12ನೇ ಶತಮಾನದ ಅನುಭವ ಮಂಟಪದಲ್ಲಿ ಮೊದಲ ಬಾರಿಗೆ ಸಮ್ಮಿಳಿತವಾಗಿದ್ದ ‘ಅಸಂಖ್ಯ ಪ್ರಮಥರ ಗಣಮೇಳ’ದ ಶಿವಯೋಗ ಸಂಭ್ರಮವನ್ನು 21ನೇ ಶತಮಾನದಲ್ಲಿ ಮರುಕಳಿಸುವ ಮುರುಘಾ ಶರಣರ ಕನಸು ಭಾನುವಾರ ರಾಜಧಾನಿಯಲ್ಲಿ ಶಾಂತಿಮಂತ್ರದ ಉದ್ಘೋಷದ ನಡುವೆ ನನಸಾಯಿತು.</p>.<p>ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರ ನೇತೃತ್ವದಲ್ಲಿ ನಾಡಿನ ಬಸವ ಕೇಂದ್ರಗಳು, ಬಸವ ಸಂಘಟನೆಗಳು, ವಿವಿಧ ಧಾರ್ಮಿಕ ಕೇಂದ್ರಗಳು ಮತ್ತು ಸರ್ವಜನಾಂಗದ ಮಠಾಧೀಶರ ಸಮ್ಮುಖದಲ್ಲಿ ಸಹಸ್ರಾರು ಭಕ್ತರು ಬೆಳಗಿನಿಂದ ಸಂಜೆಯವರೆಗೆ ನಡೆದ ಜ್ಞಾನದಾಸೋಹದಲ್ಲಿ ಭಾಗವಹಿಸಿದ್ದರು.</p>.<p>ಪ್ರತ್ಯೇಕ ಲಿಂಗಾಯತ ಧರ್ಮದ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಶಿವಮೂರ್ತಿ ಮುರುಘಾ ಶರಣರು, ವೀರಶೈವ ಮತ್ತು ವೈದಿಕ ಮಠಾಧೀಶರೂ ಸೇರಿದಂತೆ ವಿವಿಧ ಸಮುದಾಯಗಳ ಮಠಾಧೀಶರಿಗೆ ಸಮನ್ವಯ ವೇದಿಕೆಯನ್ನು ಕಲ್ಪಿಸಿದರು.</p>.<p>ಮಕೂರು ರಸ್ತೆಯ (ಬಿಐಇಸಿ) ನಂದಿ ಗ್ರೌಂಡ್ಸ್ನಲ್ಲಿ ಆಯೋಜಿಸಲಾಗಿದ್ದ ಸಮಾವೇಶದಬೆಳಗಿನ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಪ್ರಮುಖವಾಗಿ ಗಮನ ಸೆಳೆದರು.</p>.<p>‘ಇದೊಂದು ಅಭೂತಪೂರ್ವ ಪ್ರಯತ್ನ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶ್ಲಾಘಿಸಿದರು.</p>.<p><strong>ದಾಖಲೆಯ ಸಹಜ ಶಿವಯೋಗ</strong><br />ಬೆಳಿಗ್ಗೆ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಷಟ್ಸ್ಥಳ ಧ್ವಜಾರೋಹಣ ನೆರವೇರಿಸಿದರು. ನೊಸಲಿನ ಮೇಲೆ ವಿಭೂತಿ, ಕೊರಳಿಗೆ ಇಷ್ಟಲಿಂಗ ಮತ್ತು ರುದ್ರಾಕ್ಷಿ ಧರಿಸಿದ್ದ 24 ಸಾವಿರ ಭಕ್ತರು ಬೆಳಗಿನ 6 ಗಂಟೆಯಿಂದ 9.30ರ ವರೆಗೆ ಸಹಜ ಶಿವಯೋಗದಲ್ಲಿ ತಲ್ಲೀನರಾಗಿ ದಾಖಲೆ ನಿರ್ಮಿಸಿದರು. ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲಿಸಿದ ಅಂಕಿ ಅಂಶಗಳ ಪ್ರಕಾರ ‘ಸಹಜ ಶಿವಯೋಗದಲ್ಲಿ 24 ಸಾವಿರ ಭಕ್ತರು ಪಾಲ್ಗೊಂಡಿದ್ದಾರೆ’ ಎಂದು ಪ್ರಕಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 12ನೇ ಶತಮಾನದ ಅನುಭವ ಮಂಟಪದಲ್ಲಿ ಮೊದಲ ಬಾರಿಗೆ ಸಮ್ಮಿಳಿತವಾಗಿದ್ದ ‘ಅಸಂಖ್ಯ ಪ್ರಮಥರ ಗಣಮೇಳ’ದ ಶಿವಯೋಗ ಸಂಭ್ರಮವನ್ನು 21ನೇ ಶತಮಾನದಲ್ಲಿ ಮರುಕಳಿಸುವ ಮುರುಘಾ ಶರಣರ ಕನಸು ಭಾನುವಾರ ರಾಜಧಾನಿಯಲ್ಲಿ ಶಾಂತಿಮಂತ್ರದ ಉದ್ಘೋಷದ ನಡುವೆ ನನಸಾಯಿತು.</p>.<p>ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರ ನೇತೃತ್ವದಲ್ಲಿ ನಾಡಿನ ಬಸವ ಕೇಂದ್ರಗಳು, ಬಸವ ಸಂಘಟನೆಗಳು, ವಿವಿಧ ಧಾರ್ಮಿಕ ಕೇಂದ್ರಗಳು ಮತ್ತು ಸರ್ವಜನಾಂಗದ ಮಠಾಧೀಶರ ಸಮ್ಮುಖದಲ್ಲಿ ಸಹಸ್ರಾರು ಭಕ್ತರು ಬೆಳಗಿನಿಂದ ಸಂಜೆಯವರೆಗೆ ನಡೆದ ಜ್ಞಾನದಾಸೋಹದಲ್ಲಿ ಭಾಗವಹಿಸಿದ್ದರು.</p>.<p>ಪ್ರತ್ಯೇಕ ಲಿಂಗಾಯತ ಧರ್ಮದ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಶಿವಮೂರ್ತಿ ಮುರುಘಾ ಶರಣರು, ವೀರಶೈವ ಮತ್ತು ವೈದಿಕ ಮಠಾಧೀಶರೂ ಸೇರಿದಂತೆ ವಿವಿಧ ಸಮುದಾಯಗಳ ಮಠಾಧೀಶರಿಗೆ ಸಮನ್ವಯ ವೇದಿಕೆಯನ್ನು ಕಲ್ಪಿಸಿದರು.</p>.<p>ಮಕೂರು ರಸ್ತೆಯ (ಬಿಐಇಸಿ) ನಂದಿ ಗ್ರೌಂಡ್ಸ್ನಲ್ಲಿ ಆಯೋಜಿಸಲಾಗಿದ್ದ ಸಮಾವೇಶದಬೆಳಗಿನ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಪ್ರಮುಖವಾಗಿ ಗಮನ ಸೆಳೆದರು.</p>.<p>‘ಇದೊಂದು ಅಭೂತಪೂರ್ವ ಪ್ರಯತ್ನ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶ್ಲಾಘಿಸಿದರು.</p>.<p><strong>ದಾಖಲೆಯ ಸಹಜ ಶಿವಯೋಗ</strong><br />ಬೆಳಿಗ್ಗೆ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಷಟ್ಸ್ಥಳ ಧ್ವಜಾರೋಹಣ ನೆರವೇರಿಸಿದರು. ನೊಸಲಿನ ಮೇಲೆ ವಿಭೂತಿ, ಕೊರಳಿಗೆ ಇಷ್ಟಲಿಂಗ ಮತ್ತು ರುದ್ರಾಕ್ಷಿ ಧರಿಸಿದ್ದ 24 ಸಾವಿರ ಭಕ್ತರು ಬೆಳಗಿನ 6 ಗಂಟೆಯಿಂದ 9.30ರ ವರೆಗೆ ಸಹಜ ಶಿವಯೋಗದಲ್ಲಿ ತಲ್ಲೀನರಾಗಿ ದಾಖಲೆ ನಿರ್ಮಿಸಿದರು. ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲಿಸಿದ ಅಂಕಿ ಅಂಶಗಳ ಪ್ರಕಾರ ‘ಸಹಜ ಶಿವಯೋಗದಲ್ಲಿ 24 ಸಾವಿರ ಭಕ್ತರು ಪಾಲ್ಗೊಂಡಿದ್ದಾರೆ’ ಎಂದು ಪ್ರಕಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>