<p><strong>ಬೆಂಗಳೂರು</strong>: ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳ ಮೂಲಕ ‘ಗಾಂಧಿ ಜಯಂತಿ’ಯನ್ನು ಆಚರಿಸಲು ‘ಗಾಂಧಿ ಭಾರತ’ ಶತಮಾನೋತ್ಸವ ಸಮಿತಿ ನಿರ್ಧರಿಸಿದೆ.</p>.<p>1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದ ನೆನಪಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಸಮಿತಿಯ ಸಭೆಯು ವಿಧಾನಸೌಧದಲ್ಲಿ ಶನಿವಾರ ನಡೆಯಿತು.</p>.<p>ಗಾಂಧಿ ಜ್ಯೋತಿ ಯಾತ್ರೆ, ಧ್ಯಾನಮಗ್ನ ಪ್ರತಿಮೆಯೊಂದಿಗೆ ಗಾಂಧಿ ಸ್ತಂಭ ಸ್ಥಾಪನೆ, ಶಾಲೆ- ಕಾಲೇಜುಗಳಲ್ಲಿ ಗಾಂಧೀಜಿಯ ಧ್ಯಾನಚಿತ್ರ ಮತ್ತು ಏಳು ಸಾಮಾಜಿಕ ಪಾಪಗಳ ಸಂದೇಶ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.</p>.<p>ಅಲ್ಲದೆ, ನಾಟಕಗಳು ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಗಳು ಡಿಸೆಂಬರ್ ಅಂತ್ಯದವರೆಗೆ ಮುಂದುವರಿಯಲಿವೆ.</p>.<p>ಗಾಂಧೀಜಿಯ ಏಳು ಸಾಮಾಜಿಕ ಪಾಪಗಳು, ಭಾರತ ಸಂವಿಧಾನದ ಪ್ರಸ್ತಾವನೆ ಹಾಗೂ ಗಾಂಧೀಜಿಯ ಚಿತ್ರವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ತೆಗೆದುಕೊಂಡಿರುವ ಈ ಕ್ರಮಕ್ಕೆ ಸಭೆ ಮೆಚ್ಚುಗೆ ವ್ಯಕ್ತಪಡಿಸಿತು.</p>.<p>ಸಮಿತಿಯ ಗೌರವಾಧ್ಯಕ್ಷ ವೀರಪ್ಪ ಮೊಯಿಲಿ, ಸಂಚಾಲಕ ಬಿ.ಎಲ್. ಶಂಕರ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಡಿ.ಆರ್. ಪಾಟೀಲ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳ ಮೂಲಕ ‘ಗಾಂಧಿ ಜಯಂತಿ’ಯನ್ನು ಆಚರಿಸಲು ‘ಗಾಂಧಿ ಭಾರತ’ ಶತಮಾನೋತ್ಸವ ಸಮಿತಿ ನಿರ್ಧರಿಸಿದೆ.</p>.<p>1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದ ನೆನಪಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಸಮಿತಿಯ ಸಭೆಯು ವಿಧಾನಸೌಧದಲ್ಲಿ ಶನಿವಾರ ನಡೆಯಿತು.</p>.<p>ಗಾಂಧಿ ಜ್ಯೋತಿ ಯಾತ್ರೆ, ಧ್ಯಾನಮಗ್ನ ಪ್ರತಿಮೆಯೊಂದಿಗೆ ಗಾಂಧಿ ಸ್ತಂಭ ಸ್ಥಾಪನೆ, ಶಾಲೆ- ಕಾಲೇಜುಗಳಲ್ಲಿ ಗಾಂಧೀಜಿಯ ಧ್ಯಾನಚಿತ್ರ ಮತ್ತು ಏಳು ಸಾಮಾಜಿಕ ಪಾಪಗಳ ಸಂದೇಶ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.</p>.<p>ಅಲ್ಲದೆ, ನಾಟಕಗಳು ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಗಳು ಡಿಸೆಂಬರ್ ಅಂತ್ಯದವರೆಗೆ ಮುಂದುವರಿಯಲಿವೆ.</p>.<p>ಗಾಂಧೀಜಿಯ ಏಳು ಸಾಮಾಜಿಕ ಪಾಪಗಳು, ಭಾರತ ಸಂವಿಧಾನದ ಪ್ರಸ್ತಾವನೆ ಹಾಗೂ ಗಾಂಧೀಜಿಯ ಚಿತ್ರವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ತೆಗೆದುಕೊಂಡಿರುವ ಈ ಕ್ರಮಕ್ಕೆ ಸಭೆ ಮೆಚ್ಚುಗೆ ವ್ಯಕ್ತಪಡಿಸಿತು.</p>.<p>ಸಮಿತಿಯ ಗೌರವಾಧ್ಯಕ್ಷ ವೀರಪ್ಪ ಮೊಯಿಲಿ, ಸಂಚಾಲಕ ಬಿ.ಎಲ್. ಶಂಕರ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಡಿ.ಆರ್. ಪಾಟೀಲ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>