ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ನಡೆದ ಸರ್ವೋದಯ ದಿನಾಚರಣೆ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, 'ಹೋರಾಟದ ಹಾದಿಯಲ್ಲಿ ಎಷ್ಟೇ ಸಂಕಷ್ಟಗಳು ಬಂದರೂ ಗಾಂಧೀಜಿಯವರು ಸತ್ಯ, ಅಹಿಂಸೆ ಮತ್ತು ಶಾಂತಿಯ ಸಿದ್ಧಾಂತವನ್ನು ಎಂದೂ ಬಿಟ್ಟುಕೊಡಲಿಲ್ಲ. ನೈತಿಕವಾಗಿ ದೊಡ್ಡ ಶಕ್ತಿ ಹೊಂದಿದ್ದ ನಾಯಕ ಅವರು' ಎಂದರು.