<p><strong>ಬೆಂಗಳೂರು:</strong> ರಾಜ್ಯದಲ್ಲಿ ಇಂದು (ಬುಧವಾರ) ಗಣೇಶ ಹಬ್ಬದ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದೆ.</p><p>ನಿನ್ನೆ (ಮಂಗಳವಾರ) ಗೌರಿ ಹಬ್ಬದ ಅಂಗವಾಗಿ ವಿಶೇಷ ಪೂಜೆಗಳು ನಡೆದಿದ್ದವು. </p>.ಗೌರಿ–ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆ: ಕಮಾಂಡ್ ಸೆಂಟರ್ನಿಂದಲೇ ನಿಗಾ.ಬಾಗೇಪಲ್ಲಿ: ಗಣೇಶ ಹಬ್ಬ ಆಚರಣೆಗೆ ಸಿದ್ಧತೆ .<p>ಮನೆ ಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದ್ದು, ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯುತ್ತಿದೆ. ಗಣೇಶನ ಮೂರ್ತಿ ನೋಡಿ ಖುಷಿಯಲ್ಲಿರುವ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ. </p><p>ಮೈಸೂರು, ಕಲಬುರಗಿ, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಎಲ್ಲಾ ಜಿಲ್ಲೆಗಳು ಸೇರಿ ಉದ್ಯಾನ ನಗರಿ ಬೆಂಗಳೂರಿನಲ್ಲಿ ಯಾ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ.</p><p>ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ಬೆಂಗಳೂರಿನ ದೊಡ್ಡ ಗಣೇಶ ದೇಗುಲ ಸೇರಿದಂತೆ ವಿನಾಯಕ ದೇವಾಲಯಗಳಲ್ಲಿ ಹಬ್ಬದ ಸಡಗರ ಕಳೆಗಟ್ಟಿದೆ.</p><p>ನಗರಗಳಲ್ಲಿ ಸಂಚಾರ ದಟ್ಟಣೆಯೂ ಏರ್ಪಟ್ಟಿದೆ. ಕೆಲವೆಡೆ ಬೆಳಗ್ಗೆ ಹಾಗೂ ಸಂಜೆ ಮಳೆ ಸುರಿದಿದೆ. ಮಳೆಯನ್ನು ಲೆಕ್ಕಿಸದೇ ಜನರು ವಿನಾಯಕನ ಪೂಜೆಗಳಲ್ಲಿ ತೊಡಗಿಕೊಂಡಿದ್ದಾರೆ. </p>.ಶಿವಮೊಗ್ಗ | ಗಣೇಶ ಉತ್ಸವ: ಪೆಂಡಾಲ್ನಲ್ಲಿ ಅರಳಿದ ಕ್ರೀಡಾ ಲೋಕ....ಗಣೇಶ ಚತುರ್ಥಿ: ದಸರಾ ಆನೆಗಳಿಗೆ 'ಗಜಪೂಜೆ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಇಂದು (ಬುಧವಾರ) ಗಣೇಶ ಹಬ್ಬದ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದೆ.</p><p>ನಿನ್ನೆ (ಮಂಗಳವಾರ) ಗೌರಿ ಹಬ್ಬದ ಅಂಗವಾಗಿ ವಿಶೇಷ ಪೂಜೆಗಳು ನಡೆದಿದ್ದವು. </p>.ಗೌರಿ–ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆ: ಕಮಾಂಡ್ ಸೆಂಟರ್ನಿಂದಲೇ ನಿಗಾ.ಬಾಗೇಪಲ್ಲಿ: ಗಣೇಶ ಹಬ್ಬ ಆಚರಣೆಗೆ ಸಿದ್ಧತೆ .<p>ಮನೆ ಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದ್ದು, ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯುತ್ತಿದೆ. ಗಣೇಶನ ಮೂರ್ತಿ ನೋಡಿ ಖುಷಿಯಲ್ಲಿರುವ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ. </p><p>ಮೈಸೂರು, ಕಲಬುರಗಿ, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಎಲ್ಲಾ ಜಿಲ್ಲೆಗಳು ಸೇರಿ ಉದ್ಯಾನ ನಗರಿ ಬೆಂಗಳೂರಿನಲ್ಲಿ ಯಾ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ.</p><p>ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ಬೆಂಗಳೂರಿನ ದೊಡ್ಡ ಗಣೇಶ ದೇಗುಲ ಸೇರಿದಂತೆ ವಿನಾಯಕ ದೇವಾಲಯಗಳಲ್ಲಿ ಹಬ್ಬದ ಸಡಗರ ಕಳೆಗಟ್ಟಿದೆ.</p><p>ನಗರಗಳಲ್ಲಿ ಸಂಚಾರ ದಟ್ಟಣೆಯೂ ಏರ್ಪಟ್ಟಿದೆ. ಕೆಲವೆಡೆ ಬೆಳಗ್ಗೆ ಹಾಗೂ ಸಂಜೆ ಮಳೆ ಸುರಿದಿದೆ. ಮಳೆಯನ್ನು ಲೆಕ್ಕಿಸದೇ ಜನರು ವಿನಾಯಕನ ಪೂಜೆಗಳಲ್ಲಿ ತೊಡಗಿಕೊಂಡಿದ್ದಾರೆ. </p>.ಶಿವಮೊಗ್ಗ | ಗಣೇಶ ಉತ್ಸವ: ಪೆಂಡಾಲ್ನಲ್ಲಿ ಅರಳಿದ ಕ್ರೀಡಾ ಲೋಕ....ಗಣೇಶ ಚತುರ್ಥಿ: ದಸರಾ ಆನೆಗಳಿಗೆ 'ಗಜಪೂಜೆ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>