ಗಂಗಾ ಕಲ್ಯಾಣ ಯೋಜನೆಯಲ್ಲಿ ₹430 ಕೋಟಿ ಮೊತ್ತದಷ್ಟು ಅವ್ಯವಹಾರ ನಡೆದಿದೆ. ಆದರೆ, ಸರ್ಕಾರ ಸಮರ್ಪಕವಾಗಿ ಉತ್ತರ ನೀಡಿಲ್ಲ ಎಂದು ದೂರಿ ಕಾಂಗ್ರೆಸ್ನ ಪ್ರಿಯಾಂಕ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಪ್ರಸಾದ್ ಅಬ್ಬಯ್ಯ, ಭೀಮಾ ನಾಯಕ್ ಧರಣಿ ನಡೆಸಲು ಸಭಾಧ್ಯಕ್ಷರ ಪೀಠದ ಮುಂದೆ ಧಾವಿಸಿದರು. ಆರೋಪಗಳ ಕುರಿತು ಶಾಸಕರ ಸಭೆ ಕರೆಸುತ್ತೇನೆ ಎಂದು ಸಮಾಜ ಕಲ್ಯಾಣ ಸಚಿವ ಭರವಸೆ ನೀಡಿದರೂ ಕಾಂಗ್ರೆಸ್ ಸದಸ್ಯರು ಜಗ್ಗಲಿಲ್ಲ.