ಉಳ್ಳಾಲ ಸೇತುವೆಯು ಆತ್ಮಹತ್ಯೆಯ ತಾಣವಾಗಿ ಮಾರ್ಪಟ್ಟ ಬಳಿಕ ₹50 ಲಕ್ಷ ವೆಚ್ಚದಲ್ಲಿ ಸೇತುವೆಯ ನಾಲ್ಕು ಕಡೆಗಳಲ್ಲೂ ತಂತಿ ಬೇಲಿ ಅಳವಡಿಸಲಾಗಿದೆ. ಆತ್ಮಹತ್ಯೆ ಪ್ರಕರಣ ಕಡಿಮೆಯಾದರೂ, ತ್ಯಾಜ್ಯ ಎಸೆಯುವವರಿಗೆ ಕಡಿವಾಣ ಬಿದ್ದಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿಡಾಡುವ ವಿಡಿಯೊದಲ್ಲಿ ಕಾರಿನ ಸಂಖ್ಯೆ ಸ್ಪಷ್ಟವಾಗಿ ಕಾಣುತ್ತಿದ್ದು, ಅದರ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದರು.