‘ಗೌರಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಗಳು, ಪಿಸ್ತೂಲ್ ಒದಗಿಸುವ ಹಾಗೂ ಅದನ್ನು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಶರದ್ಗೆ ಕೊಟ್ಟಿದ್ದರು. ಪಿಸ್ತೂಲ್ ಸಹ ಆತನ ಬಳಿಯೇ ಇದೆ ಎಂಬುದಕ್ಕೆ ಪುರಾವೆಗಳಿವೆ. ಅದನ್ನು ಆಧರಿಸಿ ಆತನನ್ನು ಬಂಧಿಸಿದ್ದೇವೆ. ಆತನನ್ನು ಮತ್ತಷ್ಟು ದಿನ ವಿಚಾರಣೆಗೆ ಒಳಪಡಿಸಬೇಕು. ಹೀಗಾಗಿ, ನಮ್ಮ ಕಸ್ಟಡಿಗೆ ನೀಡಬೇಕು’ ಎಂದು ಎಸ್ಐಟಿ ಅಧಿಕಾರಿಗಳು, ನ್ಯಾಯಾಲಯಕ್ಕೆ ಮನವಿ ಮಾಡಿದರು.