ಆರೋಪಿಯನ್ನು ಜಿಲ್ಲೆಗೆ ಕರೆತಂದಿರುವ ಬಗ್ಗೆ ಖಚಿತ ಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ, ‘ಯಾವ ಯಾವ ಪ್ರದೇಶಗಳಿಗೆ ಅವರನ್ನು ಎಸ್ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ ಎನ್ನುವುದು ಗೊತ್ತಿಲ್ಲ.ಸ್ಥಳ ಪರಿಶೀಲನೆ ನಡೆಸಿದ ನಂತರ ರಾತ್ರಿ ವಾಪಸ್ ತೆರಳಬಹುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.