ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಗೆ ಗೌರಿ ಹತ್ಯೆ ಪ್ರಮುಖ ಆರೋಪಿ ಪರಶುರಾಮ ವಾಘ್ಮೋರೆ

Last Updated 21 ಜೂನ್ 2018, 6:58 IST
ಅಕ್ಷರ ಗಾತ್ರ

ಬೆಳಗಾವಿ:ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ವಾಘ್ಮೋರೆ ಅವರನ್ನು ತನಿಖೆಗಾಗಿ ಬೆಳಗಾವಿಗೆ ಬುಧವಾರ ರಾತ್ರಿ ವಿಶೇಷ ತನಿಖಾ ದಳದ(ಎಸ್‌ಐಟಿ) ಅಧಿಕಾರಿಗಳು ಕರೆತಂದಿದ್ದಾರೆ.

ಗುಂಡು ಹೊಡೆಯುವ ತರಬೇತಿಯನ್ನು ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಪಡೆದಿದ್ದಾಗಿ ಪರಶುರಾಮ ತನಿಖೆಯ ವೇಳೆ ಬಾಯ್ಬಿಟ್ಟಿದ್ದ.ಆ ಸ್ಥಳಗಳ ಪರಿಶೀಲನೆಗಾಗಿ ಎಸ್‌ಐಟಿ ಅಧಿಕಾರಿಗಳು ಪರಶುರಾಮನನ್ನು ಕರೆತಂದಿದ್ದಾರೆ.ಗುರುವಾರ ದಿನವಿಡೀ ಅಂತಹ ಪ್ರದೇಶಗಳ ಪರಿಶೀಲನೆ ನಡೆಸಿ ವಾಪಸ್ಸಾಗಲಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಪಿಯನ್ನು ಜಿಲ್ಲೆಗೆ ಕರೆತಂದಿರುವ ಬಗ್ಗೆ ಖಚಿತ ಪಡಿಸಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ, ‘ಯಾವ ಯಾವ ಪ್ರದೇಶಗಳಿಗೆ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ ಎನ್ನುವುದು ಗೊತ್ತಿಲ್ಲ.ಸ್ಥಳ ಪರಿಶೀಲನೆ ನಡೆಸಿದ ನಂತರ ರಾತ್ರಿ ವಾಪಸ್‌ ತೆರಳಬಹುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.

ಇನ್ನಷ್ಟು:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT