<p>ಗೌರಿಬಿದನೂರು: ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಇಲ್ಲಿನ ರೇಮಂಡ್ಸ್ ಕಾರ್ಖಾನೆಯಲ್ಲಿ ಕಾರ್ಮಿಕ ದಿನದ ಬಗ್ಗೆ ಅರಿವು, ನೆರವು ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ್ ಮಾತನಾಡಿ, 1886ರಲ್ಲಿ ಪ್ರಾರಂಭವಾದ ಕಾರ್ಮಿಕ ದಿನಾಚರಣೆಯು ಇಂದಿಗೂ ಮುಂದುವರೆದಿದೆ. ಇದಕ್ಕೆ ಕಾರ್ಮಿಕರ ಸಮಸ್ಯೆ ಬಗೆಹರಿಯದಿರುವುದೇ ಕಾರಣ ಅಥವಾ ಕಾರ್ಮಿಕರ ಅಗತ್ಯತೆ ಸಮಾಜಕ್ಕೆ ಇದೆ ಎಂಬುದಾಗಿದೆ ಎಂದರು.</p>.<p>ರೈತರು ಮತ್ತು ಕಾರ್ಮಿಕರು ದೇಶದ ಬೆನ್ನೆಲುಬು. ಇಂತಹ ಶ್ರಮಿಕರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ನೆರವು ಪಡೆಯಬಹುದು ಎಂದರು.</p>.<p>ಕಾರ್ಮಿಕ ನಿರೀಕ್ಷಕ ಹರೀಶ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಕಾರ್ಮಿಕರಿಗೆ ಬೇಕಾದ ಹಲವು ಸೌಲಭ್ಯಗಳನ್ನು ಕಲ್ಪಿಸಿದರು. ಸರ್ಕಾರವು ಪ್ರತಿ ಕಾರ್ಮಿಕನಿಗೆ ನಿಗದಿತ ವೇತನ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ವಾರಕ್ಕೊಮ್ಮೆ ರಜೆ, ಇಎಸ್ಐ, ಪಿಎಫ್, ಮಹಿಳೆಯರಿಗೆ ವೇತನ ಸಹಿತ ಹೆರಿಗೆ ರಜೆ ಸೇರಿದಂತೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಿದೆ. ಕಾರ್ಮಿಕರು ಈ ಎಲ್ಲ ಹಕ್ಕುಗಳ ಬಗ್ಗೆ ತಿಳಿದುಕೊಂಡು, ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.</p>.<p>ಈ ವೇಳೆ ವಕೀಲರ ಸಂಘದ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ವಿಜಯ್ ಕುಮಾರ್, ಬಿ. ಲಿಂಗಪ್ಪ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ, ರೇಮಂಡ್ಸ್ ವ್ಯವಸ್ಥಾಪಕ ದಿಲೀಪ್, ನಾಗರಾಜ್, ಕಾರ್ಮಿಕ ಇಲಾಖೆ ಸಿಬ್ಬಂದಿ ಪವನ್ ಹಾಗೂ ಗಾರ್ಮೆಂಟ್ಸ್ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-16-2116029421</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಇಲ್ಲಿನ ರೇಮಂಡ್ಸ್ ಕಾರ್ಖಾನೆಯಲ್ಲಿ ಕಾರ್ಮಿಕ ದಿನದ ಬಗ್ಗೆ ಅರಿವು, ನೆರವು ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ್ ಮಾತನಾಡಿ, 1886ರಲ್ಲಿ ಪ್ರಾರಂಭವಾದ ಕಾರ್ಮಿಕ ದಿನಾಚರಣೆಯು ಇಂದಿಗೂ ಮುಂದುವರೆದಿದೆ. ಇದಕ್ಕೆ ಕಾರ್ಮಿಕರ ಸಮಸ್ಯೆ ಬಗೆಹರಿಯದಿರುವುದೇ ಕಾರಣ ಅಥವಾ ಕಾರ್ಮಿಕರ ಅಗತ್ಯತೆ ಸಮಾಜಕ್ಕೆ ಇದೆ ಎಂಬುದಾಗಿದೆ ಎಂದರು.</p>.<p>ರೈತರು ಮತ್ತು ಕಾರ್ಮಿಕರು ದೇಶದ ಬೆನ್ನೆಲುಬು. ಇಂತಹ ಶ್ರಮಿಕರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ನೆರವು ಪಡೆಯಬಹುದು ಎಂದರು.</p>.<p>ಕಾರ್ಮಿಕ ನಿರೀಕ್ಷಕ ಹರೀಶ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಕಾರ್ಮಿಕರಿಗೆ ಬೇಕಾದ ಹಲವು ಸೌಲಭ್ಯಗಳನ್ನು ಕಲ್ಪಿಸಿದರು. ಸರ್ಕಾರವು ಪ್ರತಿ ಕಾರ್ಮಿಕನಿಗೆ ನಿಗದಿತ ವೇತನ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ವಾರಕ್ಕೊಮ್ಮೆ ರಜೆ, ಇಎಸ್ಐ, ಪಿಎಫ್, ಮಹಿಳೆಯರಿಗೆ ವೇತನ ಸಹಿತ ಹೆರಿಗೆ ರಜೆ ಸೇರಿದಂತೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಿದೆ. ಕಾರ್ಮಿಕರು ಈ ಎಲ್ಲ ಹಕ್ಕುಗಳ ಬಗ್ಗೆ ತಿಳಿದುಕೊಂಡು, ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.</p>.<p>ಈ ವೇಳೆ ವಕೀಲರ ಸಂಘದ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ವಿಜಯ್ ಕುಮಾರ್, ಬಿ. ಲಿಂಗಪ್ಪ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ, ರೇಮಂಡ್ಸ್ ವ್ಯವಸ್ಥಾಪಕ ದಿಲೀಪ್, ನಾಗರಾಜ್, ಕಾರ್ಮಿಕ ಇಲಾಖೆ ಸಿಬ್ಬಂದಿ ಪವನ್ ಹಾಗೂ ಗಾರ್ಮೆಂಟ್ಸ್ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-16-2116029421</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>