‘ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಅವರಿಗೆ ₹ 90 ಲಕ್ಷ ಲಂಚ ನೀಡಿದ್ದೇನೆ’ ಎಂದು ಮಂಜುನಾಥ್ ಆರೋಪಿಸಿರುವ ಆಡಿಯೊ ತುಣುಕನ್ನು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದರು. ಪತ್ರಿಕಾಗೋಷ್ಠಿಯ ವಿವರಗಳೊಂದಿಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ಮುಖಂಡರಾದ ಎಸ್. ಮನೋಹರ್, ಎ. ಆನಂದ ಮತ್ತು ಪುಟ್ಟರಾಜು, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.