<p><strong>ಬೆಂಗಳೂರು</strong>: ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರದಲ್ಲಿ "ಪ್ರೇತಕಳೆ" ರಾರಾಜಿಸುತ್ತಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.</p><p>ನಾಳೆ ನಡೆಯಲಿರುವ ಹೊಸಪೇಟೆ ಸಾಧನಾ ಸಮಾವೇಶ ವಿರೋಧಿಸಿ ಇಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಂತ್ರಿ ಮಂಡಲದ ಸಚಿವರ ಮೊಗದಲ್ಲಿ ಕಿಂಚಿತ್ತೂ ಕಳೆಯಿಲ್ಲ. ಪಟ್ಟ ಬಿಟ್ಟುಕೊಡಬೇಕಾದ "due date" ಹತ್ತಿರ ಬಂತಲ್ಲ ಎಂಬ ಸೂತಕ, ಸಂಭ್ರಮಕ್ಕಿಂತಲೂ ಭಯಂಕರವಾಗಿ ಕಾಡುತ್ತಿದೆ ಎಂದಿದ್ದಾರೆ.</p><p>ಎರಡು ವರ್ಷದಲ್ಲಿ ನಯ್ಯಾಪೈಸೆಯಷ್ಟೂ ಜನಪರ ಕೆಲಸ ಮಾಡದ ಈ "ದಂಡಪಿಂಡ" ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ಜನಾದೇಶದ ಕ್ರೂರ ವ್ಯಂಗ್ಯವಾಗಿದೆ ಎಂದಿದ್ದಾರೆ.</p><p>ಅಷ್ಟಕ್ಕೂ ಸಿದ್ದರಾಮಯ್ಯನವರೇ ನೀವು ಈ ರೀತಿ ಸಂಭ್ರಮಿಸುವುದಾದರೂ ಏಕೆ ? ಎಂದು ಪ್ರಶ್ನಸಿರುವ ಅವರು ಈ ಸಿದ್ದರಾಮಯ್ಯ ಅವರಿಗೆ ಈ ಕೆಳಗಿನ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.</p>.<p>- ಅಭಿವೃದ್ಧಿ ನಿಧಿಯನ್ನು ಸಕಾಲಕ್ಕೆ ಬಿಡುಗಡೆ ಮಾಡದೇ ರಾಜ್ಯದ ಬೆಳವಣಿಗೆಯ ದರವನ್ನು ಹತ್ತು ವರ್ಷ ಹಿಂದೆ ತಳ್ಳಿದಕ್ಕಾಗಿಯೇ ?</p><p>- ಮರಣ ಪ್ರಮಾಣ ಪತ್ರದಿಂದ ಮೊದಲ್ಗೊಂಡು ಎಲ್ಲ ಸರ್ಕಾರಿ ಸೇವೆಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿದಕ್ಕಾಗಿಯೇ ?</p><p>- ಕೇಂದ್ರ ಸರ್ಕಾರದ ಜತೆ ಕಾಲು ಕೆದರಿ ಜಗಳಕ್ಕೆ ನಿಂತು ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳನ್ನು ಹಳ್ಳಹಿಡಿಸಿದಕ್ಕಾಗಿಯೇ ?</p><p>- ರಾಜ್ಯವನ್ನು ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ತುಂಡು ಮಾಡುತ್ತಿರುವುದಕ್ಕಾಗಿಯೇ ?</p><p>- ಸರ್ವ ಜನಾಂಗದ ಶಾಂತಿಯ ತೋಟದ ಹೆಸರಿನಲ್ಲಿ ಹಿಂದು ಕಾರ್ಯಕರ್ತರ ರಕ್ತತರ್ಪಣ ಕೊಡುತ್ತಿರುವುದಕ್ಕಾಗಿಯೇ ?</p><p>- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಹಾಕಿದವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದಕ್ಕಾಗಿಯೇ ?</p><p>- ಜಾತಿ ಗಣತಿ ವರದಿಯಲ್ಲಿ ಪ್ರವರ್ಗ ಪರಿಷ್ಕರಣೆ ಮಾಡಿ ಹಿಂದುಳಿದ ವರ್ಗದ ಒಗ್ಗಟ್ಟು ಒಡೆದಿದ್ದಕ್ಕಾಗಿಯೇ ?</p><p>- ದಲಿತರ ಮೀಸಲು ವರ್ಗೀಕರಣ ವಿಚಾರವನ್ನು ಇನ್ನಷ್ಟು ಜಟಿಲಗೊಳಿಸಿದಕ್ಕಾಗಿಯೇ? </p><p>- ಲೋಕಾಯುಕ್ತ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ನುಂಗಿ- ನೀರು ಕುಡಿದಿದಕ್ಕಾಗಿಯೇ ?</p><p>- ಬೆಂಗಳೂರಿನ ಮೂಲ ಸೌಕರ್ಯ ವ್ಯವಸ್ಥೆಯನ್ನು ಸುರಂಗ ಮಾರ್ಗದಲ್ಲಿ ಸಮಾಧಿ ಮಾಡಿದಕ್ಕಾಗಿಯೇ ?</p><p>- ಭ್ರಷ್ಟಾಚಾರವನ್ನು ಶೇ100ಕ್ಕೆ ಹೆಚ್ಚಿಸಿದಕ್ಕಾಗಿಯೇ ?</p><p>- ಎಸ್ ಸಿಎಸ್ ಪಿ, ಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದಕ್ಕಾಗಿಯೇ ?</p><p>-ಸಂವಿಧಾನ ಬಾಹಿರವಾಗಿ ಮುಸ್ಲಿಂರಿಗೆ ಸರ್ಕಾರಿ ಗುತ್ತಿಗೆ ಹಾಗೂ ಪೂರೈಕೆಯಲ್ಲಿ ಮೀಸಲು ಕಲ್ಪಿಸಿದಕ್ಕಾಗಿಯೇ ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರದಲ್ಲಿ "ಪ್ರೇತಕಳೆ" ರಾರಾಜಿಸುತ್ತಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.</p><p>ನಾಳೆ ನಡೆಯಲಿರುವ ಹೊಸಪೇಟೆ ಸಾಧನಾ ಸಮಾವೇಶ ವಿರೋಧಿಸಿ ಇಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಂತ್ರಿ ಮಂಡಲದ ಸಚಿವರ ಮೊಗದಲ್ಲಿ ಕಿಂಚಿತ್ತೂ ಕಳೆಯಿಲ್ಲ. ಪಟ್ಟ ಬಿಟ್ಟುಕೊಡಬೇಕಾದ "due date" ಹತ್ತಿರ ಬಂತಲ್ಲ ಎಂಬ ಸೂತಕ, ಸಂಭ್ರಮಕ್ಕಿಂತಲೂ ಭಯಂಕರವಾಗಿ ಕಾಡುತ್ತಿದೆ ಎಂದಿದ್ದಾರೆ.</p><p>ಎರಡು ವರ್ಷದಲ್ಲಿ ನಯ್ಯಾಪೈಸೆಯಷ್ಟೂ ಜನಪರ ಕೆಲಸ ಮಾಡದ ಈ "ದಂಡಪಿಂಡ" ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ಜನಾದೇಶದ ಕ್ರೂರ ವ್ಯಂಗ್ಯವಾಗಿದೆ ಎಂದಿದ್ದಾರೆ.</p><p>ಅಷ್ಟಕ್ಕೂ ಸಿದ್ದರಾಮಯ್ಯನವರೇ ನೀವು ಈ ರೀತಿ ಸಂಭ್ರಮಿಸುವುದಾದರೂ ಏಕೆ ? ಎಂದು ಪ್ರಶ್ನಸಿರುವ ಅವರು ಈ ಸಿದ್ದರಾಮಯ್ಯ ಅವರಿಗೆ ಈ ಕೆಳಗಿನ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.</p>.<p>- ಅಭಿವೃದ್ಧಿ ನಿಧಿಯನ್ನು ಸಕಾಲಕ್ಕೆ ಬಿಡುಗಡೆ ಮಾಡದೇ ರಾಜ್ಯದ ಬೆಳವಣಿಗೆಯ ದರವನ್ನು ಹತ್ತು ವರ್ಷ ಹಿಂದೆ ತಳ್ಳಿದಕ್ಕಾಗಿಯೇ ?</p><p>- ಮರಣ ಪ್ರಮಾಣ ಪತ್ರದಿಂದ ಮೊದಲ್ಗೊಂಡು ಎಲ್ಲ ಸರ್ಕಾರಿ ಸೇವೆಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿದಕ್ಕಾಗಿಯೇ ?</p><p>- ಕೇಂದ್ರ ಸರ್ಕಾರದ ಜತೆ ಕಾಲು ಕೆದರಿ ಜಗಳಕ್ಕೆ ನಿಂತು ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳನ್ನು ಹಳ್ಳಹಿಡಿಸಿದಕ್ಕಾಗಿಯೇ ?</p><p>- ರಾಜ್ಯವನ್ನು ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ತುಂಡು ಮಾಡುತ್ತಿರುವುದಕ್ಕಾಗಿಯೇ ?</p><p>- ಸರ್ವ ಜನಾಂಗದ ಶಾಂತಿಯ ತೋಟದ ಹೆಸರಿನಲ್ಲಿ ಹಿಂದು ಕಾರ್ಯಕರ್ತರ ರಕ್ತತರ್ಪಣ ಕೊಡುತ್ತಿರುವುದಕ್ಕಾಗಿಯೇ ?</p><p>- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಹಾಕಿದವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದಕ್ಕಾಗಿಯೇ ?</p><p>- ಜಾತಿ ಗಣತಿ ವರದಿಯಲ್ಲಿ ಪ್ರವರ್ಗ ಪರಿಷ್ಕರಣೆ ಮಾಡಿ ಹಿಂದುಳಿದ ವರ್ಗದ ಒಗ್ಗಟ್ಟು ಒಡೆದಿದ್ದಕ್ಕಾಗಿಯೇ ?</p><p>- ದಲಿತರ ಮೀಸಲು ವರ್ಗೀಕರಣ ವಿಚಾರವನ್ನು ಇನ್ನಷ್ಟು ಜಟಿಲಗೊಳಿಸಿದಕ್ಕಾಗಿಯೇ? </p><p>- ಲೋಕಾಯುಕ್ತ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ನುಂಗಿ- ನೀರು ಕುಡಿದಿದಕ್ಕಾಗಿಯೇ ?</p><p>- ಬೆಂಗಳೂರಿನ ಮೂಲ ಸೌಕರ್ಯ ವ್ಯವಸ್ಥೆಯನ್ನು ಸುರಂಗ ಮಾರ್ಗದಲ್ಲಿ ಸಮಾಧಿ ಮಾಡಿದಕ್ಕಾಗಿಯೇ ?</p><p>- ಭ್ರಷ್ಟಾಚಾರವನ್ನು ಶೇ100ಕ್ಕೆ ಹೆಚ್ಚಿಸಿದಕ್ಕಾಗಿಯೇ ?</p><p>- ಎಸ್ ಸಿಎಸ್ ಪಿ, ಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದಕ್ಕಾಗಿಯೇ ?</p><p>-ಸಂವಿಧಾನ ಬಾಹಿರವಾಗಿ ಮುಸ್ಲಿಂರಿಗೆ ಸರ್ಕಾರಿ ಗುತ್ತಿಗೆ ಹಾಗೂ ಪೂರೈಕೆಯಲ್ಲಿ ಮೀಸಲು ಕಲ್ಪಿಸಿದಕ್ಕಾಗಿಯೇ ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>