<p><strong>ಮೈಸೂರು:</strong> ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರಲ್ಲಿ ಬುಧವಾರ ಚಾಲನೆ ದೊರೆಯಲಿದ್ದು, ‘ಗೃಹಲಕ್ಷ್ಮಿ’ಯರು ಹಾಗೂ ಗಣ್ಯರ ಸ್ವಾಗತಕ್ಕೆ ನಗರಿ ಸಜ್ಜಾಗಿದೆ.</p>.<p>ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ 1.5 ಲಕ್ಷ ಮಹಿಳೆಯರು ಸಮಾವೇಶಕ್ಕೆ ಸಾಕ್ಷಿ ಆಗಲಿದ್ದಾರೆ.</p>.<p>ಕಾರ್ಯಕ್ರಮಕ್ಕೆಂದು ಅರಮನೆ ಮಾದರಿ ಪ್ರವೇಶ ದ್ವಾರ ನಿರ್ಮಿಸಿದ್ದು, ವೇದಿಕೆಯಲ್ಲಿ 140 ಅಡಿ ಉದ್ದದ ಎಲ್ಇಡಿ ಪರದೆ ಅಳವಡಿಸಲಾಗಿದೆ. ಇಡೀ ನಗರ ಕಾಂಗ್ರೆಸ್ ನಾಯಕರ ಫ್ಲೆಕ್ಸ್, ಬ್ಯಾನರ್ಗಳಿಂದ ತುಂಬಿಹೋಗಿದೆ. ಸಮಾವೇಶಕ್ಕೆ ಜನರನ್ನು ಕರೆತರಲು ಸರ್ಕಾರವೇ ಸುಮಾರು 2 ಸಾವಿರ ಬಸ್ಗಳ ವ್ಯವಸ್ಥೆ ಮಾಡಿದೆ.</p>.<p>ಯೋಜನೆಗೆ ರಾಜ್ಯದ 1.1 ಕೋಟಿ ಮನೆಯೊಡತಿಯರು ನೋಂದಾಯಿಸಿಕೊಂಡಿದ್ದು, ಕಾರ್ಯಕ್ರಮಕ್ಕೆ ಚಾಲನೆ ದೊರೆಯುತ್ತಲೇ ಅವರೆಲ್ಲರ ಬ್ಯಾಂಕ್ ಖಾತೆಗೆ ತಲಾ ₹2 ಸಾವಿರ ಸಂದಾಯವಾಗಲಿದೆ.</p>.<p>ಈ ಮೊದಲು ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಪ್ರವಾಸದ ಕಾರಣಕ್ಕೆ ಮೈಸೂರಿಗೆ ಸ್ಥಳಾಂತರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮೂರ್ನಾಲ್ಕು ದಿನದಿಂದ ಮೈಸೂರಿನಲ್ಲಿ ಬೀಡುಬಿಟ್ಟು, ಸಿದ್ಧತೆ ಪರಿಶೀಲಿಸುತ್ತಿದ್ದಾರೆ. </p>.<p>ರಾಜ್ಯದಾದ್ಯಂತ ಪಂಚಾಯಿತಿ ಮಟ್ಟದಲ್ಲಿ 10 ಸಾವಿರ ಸ್ಥಳಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದೆ.</p>.<p><strong>ಹರಕೆ ತೀರಿಸಿದ ಸಿ.ಎಂ–ಡಿಸಿಎಂ</strong> </p><p>ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಗೃಹಲಕ್ಷ್ಮಿ ಕಾರ್ಡ್ನೊಂದಿಗೆ ಪೂಜೆ ಸಲ್ಲಿಸಿದರು. ದೇವಿಗೆ ಹಸಿರು–ಕೆಂಪು ಸೀರೆ ಕನಕಾಂಬರ–ಮಲ್ಲಿಗೆಯ ಜೊತೆಗೆ ₹2 ಸಾವಿರ ನೋಟು ಇಟ್ಟು ಹರಕೆ ತೀರಿಸಿದರು. ‘ವಿಧಾನಸಭೆ ಚುನಾವಣೆಯ ಮತದಾನದ ಹಿಂದಿನ ದಿನವಾದ ಮೇ 9ರಂದು ನಾನು ಮತ್ತು ಡಿ.ಕೆ. ಶಿವಕುಮಾರ್ ಪಕ್ಷದ ಗ್ಯಾರಂಟಿ ಯೋಜನೆಗಳ ಕಾರ್ಡುಗಳನ್ನು ಇಲ್ಲಿ ಇಟ್ಟು ಪೂಜೆ ಸಲ್ಲಿಸಿದ್ದೆವು. ಬುಧವಾರ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ದೇವಿ ಸನ್ನಿಧಿಯಲ್ಲಿ ಆಶೀರ್ವಾದ ಬೇಡಿದ್ದೇವೆ’ ಎಂದು ಸಿದ್ದರಾಮಯ್ಯ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರಲ್ಲಿ ಬುಧವಾರ ಚಾಲನೆ ದೊರೆಯಲಿದ್ದು, ‘ಗೃಹಲಕ್ಷ್ಮಿ’ಯರು ಹಾಗೂ ಗಣ್ಯರ ಸ್ವಾಗತಕ್ಕೆ ನಗರಿ ಸಜ್ಜಾಗಿದೆ.</p>.<p>ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ 1.5 ಲಕ್ಷ ಮಹಿಳೆಯರು ಸಮಾವೇಶಕ್ಕೆ ಸಾಕ್ಷಿ ಆಗಲಿದ್ದಾರೆ.</p>.<p>ಕಾರ್ಯಕ್ರಮಕ್ಕೆಂದು ಅರಮನೆ ಮಾದರಿ ಪ್ರವೇಶ ದ್ವಾರ ನಿರ್ಮಿಸಿದ್ದು, ವೇದಿಕೆಯಲ್ಲಿ 140 ಅಡಿ ಉದ್ದದ ಎಲ್ಇಡಿ ಪರದೆ ಅಳವಡಿಸಲಾಗಿದೆ. ಇಡೀ ನಗರ ಕಾಂಗ್ರೆಸ್ ನಾಯಕರ ಫ್ಲೆಕ್ಸ್, ಬ್ಯಾನರ್ಗಳಿಂದ ತುಂಬಿಹೋಗಿದೆ. ಸಮಾವೇಶಕ್ಕೆ ಜನರನ್ನು ಕರೆತರಲು ಸರ್ಕಾರವೇ ಸುಮಾರು 2 ಸಾವಿರ ಬಸ್ಗಳ ವ್ಯವಸ್ಥೆ ಮಾಡಿದೆ.</p>.<p>ಯೋಜನೆಗೆ ರಾಜ್ಯದ 1.1 ಕೋಟಿ ಮನೆಯೊಡತಿಯರು ನೋಂದಾಯಿಸಿಕೊಂಡಿದ್ದು, ಕಾರ್ಯಕ್ರಮಕ್ಕೆ ಚಾಲನೆ ದೊರೆಯುತ್ತಲೇ ಅವರೆಲ್ಲರ ಬ್ಯಾಂಕ್ ಖಾತೆಗೆ ತಲಾ ₹2 ಸಾವಿರ ಸಂದಾಯವಾಗಲಿದೆ.</p>.<p>ಈ ಮೊದಲು ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಪ್ರವಾಸದ ಕಾರಣಕ್ಕೆ ಮೈಸೂರಿಗೆ ಸ್ಥಳಾಂತರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮೂರ್ನಾಲ್ಕು ದಿನದಿಂದ ಮೈಸೂರಿನಲ್ಲಿ ಬೀಡುಬಿಟ್ಟು, ಸಿದ್ಧತೆ ಪರಿಶೀಲಿಸುತ್ತಿದ್ದಾರೆ. </p>.<p>ರಾಜ್ಯದಾದ್ಯಂತ ಪಂಚಾಯಿತಿ ಮಟ್ಟದಲ್ಲಿ 10 ಸಾವಿರ ಸ್ಥಳಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದೆ.</p>.<p><strong>ಹರಕೆ ತೀರಿಸಿದ ಸಿ.ಎಂ–ಡಿಸಿಎಂ</strong> </p><p>ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಗೃಹಲಕ್ಷ್ಮಿ ಕಾರ್ಡ್ನೊಂದಿಗೆ ಪೂಜೆ ಸಲ್ಲಿಸಿದರು. ದೇವಿಗೆ ಹಸಿರು–ಕೆಂಪು ಸೀರೆ ಕನಕಾಂಬರ–ಮಲ್ಲಿಗೆಯ ಜೊತೆಗೆ ₹2 ಸಾವಿರ ನೋಟು ಇಟ್ಟು ಹರಕೆ ತೀರಿಸಿದರು. ‘ವಿಧಾನಸಭೆ ಚುನಾವಣೆಯ ಮತದಾನದ ಹಿಂದಿನ ದಿನವಾದ ಮೇ 9ರಂದು ನಾನು ಮತ್ತು ಡಿ.ಕೆ. ಶಿವಕುಮಾರ್ ಪಕ್ಷದ ಗ್ಯಾರಂಟಿ ಯೋಜನೆಗಳ ಕಾರ್ಡುಗಳನ್ನು ಇಲ್ಲಿ ಇಟ್ಟು ಪೂಜೆ ಸಲ್ಲಿಸಿದ್ದೆವು. ಬುಧವಾರ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ದೇವಿ ಸನ್ನಿಧಿಯಲ್ಲಿ ಆಶೀರ್ವಾದ ಬೇಡಿದ್ದೇವೆ’ ಎಂದು ಸಿದ್ದರಾಮಯ್ಯ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>