<p><strong>ಬೆಂಗಳೂರು</strong>: ವಿರಳ ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿ ಕೀರ್ತನಾಳ ಚಿಕಿತ್ಸೆಗೆ ಅಗತ್ಯವಿರುವ ₹16 ಕೋಟಿಯನ್ನು ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿ ಅಡಿ ಸಂಗ್ರಹಿಸಲು ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ.</p>.<p>ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯು ಈಚೆಗೆ ಸಚಿವರನ್ನು ಭೇಟಿ ಮಾಡಿ, ತಮ್ಮ ಮಗಳಿಗೆ ಇರುವ ಕಾಯಿಲೆ ಹಾಗೂ ಅದಕ್ಕೆ ಅಗತ್ಯವಿರುವ ಚಿಕಿತ್ಸೆಯ ವೆಚ್ಚದ ಬಗ್ಗೆ ವಿವರಿಸಿದ್ದರು. ಅದಕ್ಕೆ ಸ್ಪಂದಿಸಿದ್ದ ಜಮೀರ್ ಅವರು ₹25 ಲಕ್ಷದ ಚೆಕ್ ಅನ್ನು ಬಾಲಕಿಗೆ ಹಸ್ತಾಂತರಿಸಿದ್ದರು. ಚಿಕಿತ್ಸೆಗೆ ಅಗತ್ಯವಿರುವ ಉಳಿದ ಮೊತ್ತ ಸಂಗ್ರಹಕ್ಕಾಗಿ ಕಾರ್ಪೊರೇಟ್ ಉದ್ಯಮಿಗಳನ್ನು ತಾವೇ ಸ್ವತಃ ಭೇಟಿ ಮಾಡಿ, ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.</p>.<p>ಇಂಡಿಯಾ ಬಿಲ್ಡರ್ಸ್ನ ಮಾಲೀಕ ಜಿಯಾವುಲ್ಲಾ ಷರೀಫ್ ಅವರನ್ನು ಮಂಗಳವಾರ ಭೇಟಿ ಮಾಡಿದ ಜಮೀರ್ ಅವರು, ‘ಮಗುವಿನ ಚಿಕಿತ್ಸೆಗೆ ವಾರ್ಷಿಕ ₹50 ಲಕ್ಷ ವೆಚ್ಚವಾಗುತ್ತದೆ. ಚಿಕಿತ್ಸೆಯಲ್ಲಿ ಬಳಸುವ ಔಷಧ ಭಾರತದಲ್ಲಿ ತಯಾರಾಗುವುದಿಲ್ಲ. ವಿದೇಶದಿಂದ ಆಮದು ಮಾಡಿಕೊಳ್ಳಬೇಕಿರುವ ಔಷಧಿಯು ದುಬಾರಿ ಮೊತ್ತದ್ದಾಗಿದೆ. ಬಾಲಕಿಯ ಚಿಕಿತ್ಸೆಗೆ ನೆರವಾಗಿ’ ಎಂದು ಜಿಯಾವುಲ್ಲಾ ಅವರಿಗೆ ಲಿಖಿತ ಮನವಿ ನೀಡಿದ್ದಾರೆ.</p>.<p>‘ಮನವಿಗೆ ಸ್ಪಂದಿಸಿರುವ ಜಿಯಾವುಲ್ಲಾ ಅವರು, ಅಗತ್ಯ ನೆರವನ್ನು ಒದಗಿಸುವುದಾಗಿ ತಿಳಿಸಿದ್ದಾರೆ’ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿರಳ ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿ ಕೀರ್ತನಾಳ ಚಿಕಿತ್ಸೆಗೆ ಅಗತ್ಯವಿರುವ ₹16 ಕೋಟಿಯನ್ನು ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿ ಅಡಿ ಸಂಗ್ರಹಿಸಲು ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ.</p>.<p>ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯು ಈಚೆಗೆ ಸಚಿವರನ್ನು ಭೇಟಿ ಮಾಡಿ, ತಮ್ಮ ಮಗಳಿಗೆ ಇರುವ ಕಾಯಿಲೆ ಹಾಗೂ ಅದಕ್ಕೆ ಅಗತ್ಯವಿರುವ ಚಿಕಿತ್ಸೆಯ ವೆಚ್ಚದ ಬಗ್ಗೆ ವಿವರಿಸಿದ್ದರು. ಅದಕ್ಕೆ ಸ್ಪಂದಿಸಿದ್ದ ಜಮೀರ್ ಅವರು ₹25 ಲಕ್ಷದ ಚೆಕ್ ಅನ್ನು ಬಾಲಕಿಗೆ ಹಸ್ತಾಂತರಿಸಿದ್ದರು. ಚಿಕಿತ್ಸೆಗೆ ಅಗತ್ಯವಿರುವ ಉಳಿದ ಮೊತ್ತ ಸಂಗ್ರಹಕ್ಕಾಗಿ ಕಾರ್ಪೊರೇಟ್ ಉದ್ಯಮಿಗಳನ್ನು ತಾವೇ ಸ್ವತಃ ಭೇಟಿ ಮಾಡಿ, ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.</p>.<p>ಇಂಡಿಯಾ ಬಿಲ್ಡರ್ಸ್ನ ಮಾಲೀಕ ಜಿಯಾವುಲ್ಲಾ ಷರೀಫ್ ಅವರನ್ನು ಮಂಗಳವಾರ ಭೇಟಿ ಮಾಡಿದ ಜಮೀರ್ ಅವರು, ‘ಮಗುವಿನ ಚಿಕಿತ್ಸೆಗೆ ವಾರ್ಷಿಕ ₹50 ಲಕ್ಷ ವೆಚ್ಚವಾಗುತ್ತದೆ. ಚಿಕಿತ್ಸೆಯಲ್ಲಿ ಬಳಸುವ ಔಷಧ ಭಾರತದಲ್ಲಿ ತಯಾರಾಗುವುದಿಲ್ಲ. ವಿದೇಶದಿಂದ ಆಮದು ಮಾಡಿಕೊಳ್ಳಬೇಕಿರುವ ಔಷಧಿಯು ದುಬಾರಿ ಮೊತ್ತದ್ದಾಗಿದೆ. ಬಾಲಕಿಯ ಚಿಕಿತ್ಸೆಗೆ ನೆರವಾಗಿ’ ಎಂದು ಜಿಯಾವುಲ್ಲಾ ಅವರಿಗೆ ಲಿಖಿತ ಮನವಿ ನೀಡಿದ್ದಾರೆ.</p>.<p>‘ಮನವಿಗೆ ಸ್ಪಂದಿಸಿರುವ ಜಿಯಾವುಲ್ಲಾ ಅವರು, ಅಗತ್ಯ ನೆರವನ್ನು ಒದಗಿಸುವುದಾಗಿ ತಿಳಿಸಿದ್ದಾರೆ’ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>