ಮಂಗಳೂರು: ‘ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಮೊದಲು 10 ವರ್ಷಗಳಲ್ಲಿ ಎಷ್ಟು ಮಂದಿ ಮತಾಂತರ ಆಗಿದ್ದಾರೆ ಎಂಬ ಅಂಕಿ– ಸಂಖ್ಯೆಯನ್ನು ಸರ್ಕಾರ ಜನರ ಮುಂದಿಡಬೇಕು’ ಎಂದು ಮುಖಂಡ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಶನಿವಾರ ಒತ್ತಾಯಿಸಿದರು.
ಮಂಗಳೂರಿನ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಕರ್ತರ ಜತೆಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.