‘ಹೈದರಾಬಾದ್ ಕರ್ನಾಟಕ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ನಂಜುಂಡಪ್ಪ ವರದಿಯ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. 371 (ಜೆ) ಕಾಯ್ದೆ ಜಾರಿಗೆ ಬಂದು ಐದು ವರ್ಷಗಳಾದರೂ, ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ’ ಎಂದು ಸಂಸ್ಥೆಯ ಅಧ್ಯಕ್ಷ ಅಮರನಾಥ ಸಿ.ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಬಿ.ಪಾಟೀಲ ಆರೋಪಿಸಿದ್ದಾರೆ.