ಕಾಂಗ್ರೆಸ್ ಸರ್ಕಾರ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡುತ್ತಿದೆ ಎಂಬ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅತ್ಯಾಚಾರ ಮಾಡಿದ್ದು ಪ್ರಜ್ವಲ್ ರೇವಣ್ಣ, ದೂರು ಕೊಟ್ಟಿರುವುದು ಸಂತ್ರಸ್ತ ಮಹಿಳೆಯರು. ಬಿಜೆಪಿ ವರಿಷ್ಠರಿಗೆ ಆರು ತಿಂಗಳ ಹಿಂದೆಯೇ ಪತ್ರ ಬರೆದು ಮಾಹಿತಿ ನೀಡಿದ್ದವರು ದೇವರಾಜೇಗೌಡ. ಸರ್ಕಾರ ಕಾನೂನಿನ ಪ್ರಕಾರ ತನಿಖೆ ನಡೆಸುತ್ತಿದೆ’ ಎಂದರು.