<p><strong>ಬೆಂಗಳೂರು:</strong> ‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗತಿಕ ಗುಣಮಟ್ಟದ ಶಾಲೆಯನ್ನು ತೆರೆಯಲು ಉದ್ದೇಶಿಸಲಾಗಿದೆ. ಈ ಕುರಿತು ನನ್ನ ಪರಿಕಲ್ಪನೆಯನ್ನು ಶಿಕ್ಷಣ ಸಚಿವರ ಜತೆ ಹಂಚಿಕೊಂಡಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಶುಕ್ರವಾರ ಗಮನಸೆಳೆಯುವ ಸೂಚನೆಯ ಕಲಾಪದ ವೇಳೆಯಲ್ಲಿ ಈ ವಿಷಯ ತಿಳಿಸಿದರು.</p>.<p>‘ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದೇವೆ. ನವೋದಯ ಶಾಲೆಯ ಮಾದರಿಯಲ್ಲಿ ಸಿಬಿಎಸ್ಸಿ ಗುಣಮಟ್ಟದ ಶಾಲೆಯನ್ನು ಆರಂಭಿಸಲಾಗುವುದು. ನಮ್ಮ ರಾಜ್ಯದ ಮಕ್ಕಳು ವಿಶ್ವಮಟ್ಟದಲ್ಲಿ ಸ್ಪರ್ಧಿಸುವಂತಾಗಬೇಕಾದರೆ ಜಾಗತಿಕ ಗುಣಮಟ್ಟದ ಶಾಲೆಗಳೇ ಬೇಕು. ಖಾಸಗಿ ಕಂಪನಿಗಳು ಒಂದೊಂದು ಶಾಲೆಯನ್ನು ದತ್ತು ತೆಗೆದುಕೊಂಡು ನಡೆಸಬೇಕು’ ಎಂದರು.</p>.<h2>ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕ:</h2>.<p>ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವ ಸಂಬಂಧ ಹಣಕಾಸು ಇಲಾಖೆಗೆ 2016 ರಿಂದ 2020 ವರೆಗಿನ ಪ್ರಸ್ತಾವನೆ ಕಳುಹಿಸಲಾಗಿದೆ. ಉಳಿದ ಮೂರು ವರ್ಷಗಳ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>.<p>ಕಾಂಗ್ರೆಸ್ನ ಜಿ.ಎಸ್.ಪಾಟೀಲ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿ ಅವರು ಈ ವಿಷಯ ತಿಳಿಸಿದರು. ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ‘ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೂ ನೇಮಕ ಮಾಡಬೇಕು ಅನುದಾನಿತ ಶಾಲೆಗಳು ತುಂಬಾ ಸಂಕಷ್ಟದಲ್ಲಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗತಿಕ ಗುಣಮಟ್ಟದ ಶಾಲೆಯನ್ನು ತೆರೆಯಲು ಉದ್ದೇಶಿಸಲಾಗಿದೆ. ಈ ಕುರಿತು ನನ್ನ ಪರಿಕಲ್ಪನೆಯನ್ನು ಶಿಕ್ಷಣ ಸಚಿವರ ಜತೆ ಹಂಚಿಕೊಂಡಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಶುಕ್ರವಾರ ಗಮನಸೆಳೆಯುವ ಸೂಚನೆಯ ಕಲಾಪದ ವೇಳೆಯಲ್ಲಿ ಈ ವಿಷಯ ತಿಳಿಸಿದರು.</p>.<p>‘ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದೇವೆ. ನವೋದಯ ಶಾಲೆಯ ಮಾದರಿಯಲ್ಲಿ ಸಿಬಿಎಸ್ಸಿ ಗುಣಮಟ್ಟದ ಶಾಲೆಯನ್ನು ಆರಂಭಿಸಲಾಗುವುದು. ನಮ್ಮ ರಾಜ್ಯದ ಮಕ್ಕಳು ವಿಶ್ವಮಟ್ಟದಲ್ಲಿ ಸ್ಪರ್ಧಿಸುವಂತಾಗಬೇಕಾದರೆ ಜಾಗತಿಕ ಗುಣಮಟ್ಟದ ಶಾಲೆಗಳೇ ಬೇಕು. ಖಾಸಗಿ ಕಂಪನಿಗಳು ಒಂದೊಂದು ಶಾಲೆಯನ್ನು ದತ್ತು ತೆಗೆದುಕೊಂಡು ನಡೆಸಬೇಕು’ ಎಂದರು.</p>.<h2>ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕ:</h2>.<p>ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವ ಸಂಬಂಧ ಹಣಕಾಸು ಇಲಾಖೆಗೆ 2016 ರಿಂದ 2020 ವರೆಗಿನ ಪ್ರಸ್ತಾವನೆ ಕಳುಹಿಸಲಾಗಿದೆ. ಉಳಿದ ಮೂರು ವರ್ಷಗಳ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>.<p>ಕಾಂಗ್ರೆಸ್ನ ಜಿ.ಎಸ್.ಪಾಟೀಲ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿ ಅವರು ಈ ವಿಷಯ ತಿಳಿಸಿದರು. ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ‘ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೂ ನೇಮಕ ಮಾಡಬೇಕು ಅನುದಾನಿತ ಶಾಲೆಗಳು ತುಂಬಾ ಸಂಕಷ್ಟದಲ್ಲಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>