<p><strong>ವಿಜಯಪುರ:</strong> ‘ಭಾರತ ಜೋಡೊ’ ಪಾದಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿಪೊಲೀಸ್ನವರೇನಾದರೂ ಶಾಮೀಲಾದ್ರೆ...’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆವಿಜಯಪುರ ಗ್ರಾಮೀಣ ಠಾಣೆ ಕಾನ್ಸ್ಟೆಬಲ್ವೊಬ್ಬರು ವಿರೋಧ ವ್ಯಕ್ತಪಡಿಸಿ ಫೇಸ್ಬುಕ್ನಲ್ಲಿ ಕಾಮೆಂಟ್ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದುವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವಕಾನ್ಸ್ಟೆಬಲ್ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧಕ್ಕೆ ಕಾರಣವಾಗಿದೆ.</p>.<p>‘ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದುಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದಾರೆ.</p>.<p class="Subhead"><strong>ಪರಿಶೀಲನೆ:</strong></p>.<p>‘ಕಾನ್ಸ್ಟೆಬಲ್ ತಮ್ಮ ಫೇಸ್ಬುಕ್ನಲ್ಲಿ ಕಾಮೆಟ್ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಸಂಬಂಧ ಇದುವರೆಗೆ ಯಾರೂ ದೂರು ಕೊಟ್ಟಿಲ್ಲ. ಕೊಟ್ಟರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಭಾರತ ಜೋಡೊ’ ಪಾದಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿಪೊಲೀಸ್ನವರೇನಾದರೂ ಶಾಮೀಲಾದ್ರೆ...’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆವಿಜಯಪುರ ಗ್ರಾಮೀಣ ಠಾಣೆ ಕಾನ್ಸ್ಟೆಬಲ್ವೊಬ್ಬರು ವಿರೋಧ ವ್ಯಕ್ತಪಡಿಸಿ ಫೇಸ್ಬುಕ್ನಲ್ಲಿ ಕಾಮೆಂಟ್ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದುವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವಕಾನ್ಸ್ಟೆಬಲ್ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧಕ್ಕೆ ಕಾರಣವಾಗಿದೆ.</p>.<p>‘ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದುಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದಾರೆ.</p>.<p class="Subhead"><strong>ಪರಿಶೀಲನೆ:</strong></p>.<p>‘ಕಾನ್ಸ್ಟೆಬಲ್ ತಮ್ಮ ಫೇಸ್ಬುಕ್ನಲ್ಲಿ ಕಾಮೆಟ್ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಸಂಬಂಧ ಇದುವರೆಗೆ ಯಾರೂ ದೂರು ಕೊಟ್ಟಿಲ್ಲ. ಕೊಟ್ಟರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>