ಬೆಂಗಳೂರು:ವಿನಾಯಕಗೋಕಾಕ್ವಾಙ್ಮಯ ಟ್ರಸ್ಟ್ ಹಾಗೂ ಭಾರತೀಯ ವಿದ್ಯಾಭವನ ನೀಡುವ 2022ನೇ ಸಾಲಿನ ‘ವಿ.ಕೃ.ಗೋಕಾಕ್ಪ್ರಶಸ್ತಿ’ಗೆ ಧಾರವಾಡದ ವಿಮರ್ಶಕ ಜಿ.ಎಂ. ಹೆಗಡೆ ಆಯ್ಕೆಯಾಗಿದ್ದಾರೆ.
ಟ್ರಸ್ಟ್ ಅಧ್ಯಕ್ಷ ಬಿ.ಎಸ್. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಅನಿಲ್ ಗೋಕಾಕ್, ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ನ. ರವಿಕುಮಾರ್ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು₹ 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಸೆಪ್ಟೆಂಬರ್ ಎರಡನೇ ವಾರ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.