<p><strong>ಬೆಂಗಳೂರು:</strong> ರಾಜ್ಯೋತ್ಸವ ಪ್ರಶಸ್ತಿಯಂತೆ ಕ್ರೀಡೆ, ಸಾಹಿತ್ಯ, ಕಲೆ, ಪತ್ರಿಕೋದ್ಯಮ, ಕೈಗಾರಿಕೆ, ಪರಿಸರ ಸಂರಕ್ಷಣೆ ಸೇರಿ ಎಲ್ಲಾ ಕ್ಷೇತ್ರದ ಸಾಧಕರಿಗೆ ‘ಕೆಂಪೇಗೌಡ ಪ್ರಶಸ್ತಿ’ ನೀಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಕೆಂಪೇಗೌಡ ಜಯಂತಿ ಆಚರಣೆಯ ಸಿದ್ಧತೆಗಾಗಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನಂತರ ಅವರು ಮಾತನಾಡಿದರು.</p>.<p>ಕೆಂಪೇಗೌಡರ ಜನ್ಮದಿನವಾದ ಜೂನ್ 27ರಂದು ಸಂಜೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಬೇಕಿತ್ತು. ವಾರ್ಡ್ ಮಟ್ಟಕ್ಕೆ ಸೀಮಿತಗೊಳಿಸುವುದು ಬೇಡ ಎಂದು ನಿರ್ಧರಿಸಿ, ಮಾರ್ಗಸೂಚಿ ನಿಗದಿ ಮಾಡಲು ಸೂಚಿಸಲಾಗಿದೆ. ಪ್ರಶಸ್ತಿ ಪಟ್ಟಿ ಸಿದ್ಧಪಡಿಸಲು ಆಯ್ಕೆ ಸಮಿತಿ ರಚಿಸಲಾಗುವುದು ಎಂದರು.</p>.<p>ಕೆಂಪೇಗೌಡ ಜಯಂತಿ ದಿನದಂದೇ ‘ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ’ದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪ್ರಾಧಿಕಾರಕ್ಕೆ ಸುಮನಹಳ್ಳಿ ಬಳಿ ಐದು ಎಕರೆ ಜಾಗವನ್ನು ನಿಗದಿ ಮಾಡಲಾಗಿದೆ. ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ವರ್ಷವೂ ಕೆಂಪೇಗೌಡರ ಗೋಪುರಗಳಿಂದ ಜ್ಯೋತಿ ಬರಲಿದ್ದು, ಪ್ರತಿ ಗೋಪುರಕ್ಕೂ ಒಬ್ಬ ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. 27ರಂದು ಬೆಳಿಗ್ಗೆ ಬಾಬು ಜಗಜೀವನ್ ರಾಮ್ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕೆಂಪೇಗೌಡ ಪ್ರಾಧಿಕಾರದಿಂದ ಮೈಸೂರು ದಸರಾಕ್ಕೆ ಪ್ರತಿ ವರ್ಷ ಒಂದು ಸ್ಥಬ್ಧಚಿತ್ರ ಕಳುಹಿಸಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆರ್ಥಿಕ ನೆರವು ನೀಡಲಾಗುವುದು. ಶಾಲೆಗಳಲ್ಲಿ ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಆ ಮೂಲಕ ಬೆಂಗಳೂರು ಹಾಗೂ ಕೆಂಪೇಗೌಡರ ಇತಿಹಾಸದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲಾಗುವುದು ಎಂದರು.</p>.<p>ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ವಿಮಾನನಿಲ್ದಾಣದ ಬಳಿ ಪ್ರತಿಮೆ ಸ್ಥಾಪಿಸಿದರು. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿ ಕಾರ್ಯಕ್ರಮ ಮಾಡಿದರು. ಗುತ್ತಿಗೆದಾರರಿಗೆ ಹಣವನ್ನೇ ನೀಡಿರಲಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯೋತ್ಸವ ಪ್ರಶಸ್ತಿಯಂತೆ ಕ್ರೀಡೆ, ಸಾಹಿತ್ಯ, ಕಲೆ, ಪತ್ರಿಕೋದ್ಯಮ, ಕೈಗಾರಿಕೆ, ಪರಿಸರ ಸಂರಕ್ಷಣೆ ಸೇರಿ ಎಲ್ಲಾ ಕ್ಷೇತ್ರದ ಸಾಧಕರಿಗೆ ‘ಕೆಂಪೇಗೌಡ ಪ್ರಶಸ್ತಿ’ ನೀಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಕೆಂಪೇಗೌಡ ಜಯಂತಿ ಆಚರಣೆಯ ಸಿದ್ಧತೆಗಾಗಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನಂತರ ಅವರು ಮಾತನಾಡಿದರು.</p>.<p>ಕೆಂಪೇಗೌಡರ ಜನ್ಮದಿನವಾದ ಜೂನ್ 27ರಂದು ಸಂಜೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಬೇಕಿತ್ತು. ವಾರ್ಡ್ ಮಟ್ಟಕ್ಕೆ ಸೀಮಿತಗೊಳಿಸುವುದು ಬೇಡ ಎಂದು ನಿರ್ಧರಿಸಿ, ಮಾರ್ಗಸೂಚಿ ನಿಗದಿ ಮಾಡಲು ಸೂಚಿಸಲಾಗಿದೆ. ಪ್ರಶಸ್ತಿ ಪಟ್ಟಿ ಸಿದ್ಧಪಡಿಸಲು ಆಯ್ಕೆ ಸಮಿತಿ ರಚಿಸಲಾಗುವುದು ಎಂದರು.</p>.<p>ಕೆಂಪೇಗೌಡ ಜಯಂತಿ ದಿನದಂದೇ ‘ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ’ದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪ್ರಾಧಿಕಾರಕ್ಕೆ ಸುಮನಹಳ್ಳಿ ಬಳಿ ಐದು ಎಕರೆ ಜಾಗವನ್ನು ನಿಗದಿ ಮಾಡಲಾಗಿದೆ. ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ವರ್ಷವೂ ಕೆಂಪೇಗೌಡರ ಗೋಪುರಗಳಿಂದ ಜ್ಯೋತಿ ಬರಲಿದ್ದು, ಪ್ರತಿ ಗೋಪುರಕ್ಕೂ ಒಬ್ಬ ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. 27ರಂದು ಬೆಳಿಗ್ಗೆ ಬಾಬು ಜಗಜೀವನ್ ರಾಮ್ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕೆಂಪೇಗೌಡ ಪ್ರಾಧಿಕಾರದಿಂದ ಮೈಸೂರು ದಸರಾಕ್ಕೆ ಪ್ರತಿ ವರ್ಷ ಒಂದು ಸ್ಥಬ್ಧಚಿತ್ರ ಕಳುಹಿಸಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆರ್ಥಿಕ ನೆರವು ನೀಡಲಾಗುವುದು. ಶಾಲೆಗಳಲ್ಲಿ ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಆ ಮೂಲಕ ಬೆಂಗಳೂರು ಹಾಗೂ ಕೆಂಪೇಗೌಡರ ಇತಿಹಾಸದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲಾಗುವುದು ಎಂದರು.</p>.<p>ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ವಿಮಾನನಿಲ್ದಾಣದ ಬಳಿ ಪ್ರತಿಮೆ ಸ್ಥಾಪಿಸಿದರು. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿ ಕಾರ್ಯಕ್ರಮ ಮಾಡಿದರು. ಗುತ್ತಿಗೆದಾರರಿಗೆ ಹಣವನ್ನೇ ನೀಡಿರಲಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>