<p><strong>ಬೆಂಗಳೂರು:</strong> ಬಾಲಕಿಯರು ಗರ್ಭಧರಿಸುವುದನ್ನು ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಂಬಂಧ ಚರ್ಚೆ ನಡೆಸಲಾಯಿತು. ಇದಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದರು.</p>.<p>18 ವರ್ಷಗಳ ಒಳಗಿನ ಬಾಲಕಿಯರು ಗರ್ಭಧರಿಸಿದಾಗ ಅವರ ರಕ್ಷಣೆ, ವೈದ್ಯಕೀಯ ನೆರವು ಮತ್ತು ಮನೋಸ್ಥೈರ್ಯ ಹೆಚ್ಚಿಸಲು ಮತ್ತು ಕಾನೂನಾತ್ಮಕ ಕ್ರಮ ಜರುಗಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮಧ್ಯೆ ಸಮನ್ವಯದ ಅಗತ್ಯವೂ ಇದೆ. ಇದಕ್ಕಾಗಿ ನಿಯಮಾವಳಿ ರೂಪಿಸಲಾಗುವುದು ಎಂದು ಹೇಳಿದರು.</p>.<p><strong>ಗ್ರಾಮಗಳಿಗೆ ಸೌರ ಬೀದಿ ದೀಪ:</strong></p>.<p>‘ಹೊಂಬೆಳಕು’ ಯೋಜನೆಯಡಿ 50 ಗ್ರಾಮಗಳಲ್ಲಿ ₹25 ಕೋಟಿ ವೆಚ್ಚದಲ್ಲಿ ಸೌರ ಬೀದಿ ದೀಪ ಅಳವಡಿಸಲು ಒಪ್ಪಿಗೆ ನೀಡಲಾಗಿದೆ. ಈ ವರ್ಷ ₹10 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.</p>.<p><strong>ಕ್ರಯಪತ್ರ ಕಾಲಾವಧಿ ಇಳಿಕೆ:</strong></p>.<p>ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಲೀಸ್ ಕಂ ಸೇಲ್ ಆಧಾರದಲ್ಲಿ ಹಂಚಿಕೆಯಾದ ಮಳಿಗೆ ಮತ್ತು ನಿವೇಶನಗಳ ಕ್ರಯಪತ್ರ ನೀಡುವ ಕನಿಷ್ಠ ಕಾಲಾವಧಿ 10 ವರ್ಷಗಳಿಂದ 2 ವರ್ಷಗಳಿಗೆ ಇಳಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.</p>.<p><strong>ಹಣಕಾಸು ಆಯೋಗಕ್ಕೆ ಜ್ಞಾಪನ ಪತ್ರ:</strong></p>.<p>16 ನೇ ಕೇಂದ್ರ ಹಣಕಾಸು ಆಯೋಗಕ್ಕೆ ಜ್ಞಾಪನ ಪತ್ರವನ್ನು ಸಲ್ಲಿಸಲು ತೀರ್ಮಾನಿಸಲಾಗಿದ್ದು. ಜ್ಞಾಪನ ಪತ್ರವನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯರಿಗೆ ಅಧಿಕಾರ ನೀಡಲಾಗಿದೆ ಎಂದು ಪಾಟೀಲ ತಿಳಿಸಿದರು.</p>.<p><strong>ಪ್ರಮುಖ ತೀರ್ಮಾನಗಳು</strong></p><ul><li><p>₹85 ಕೋಟಿ ವೆಚ್ಚದಲ್ಲಿ 592 ಅಂಗನವಾಡಿ ಕೇಂದ್ರಗಳು ನಿರ್ಮಾಣ</p></li><li><p>ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಹಾರ ಪೂರೈಕೆ ಮಾಡಲು ಜಿಲ್ಲಾವಾರು ಟೆಂಡರ್ ಆಹ್ವಾನಿಸಲು ಒಪ್ಪಿಗೆ</p></li><li><p>ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಚಿಕ್ಕಲಪರ್ವಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ₹397.50 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಒಪ್ಪಿಗೆ</p></li><li><p>ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ವೇಗಗೊಳಿಸುವ ಕೇಂದ್ರ ಸರ್ಕಾರದ(ಆರ್ಎಎಂಪಿ) ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ. ಇದರಲ್ಲಿ ಕೇಂದ್ರದ ಪಾಲು ₹118.72 ಕೋಟಿ ಮತ್ತು ರಾಜ್ಯದ ಪಾಲು ₹147.87 ಕೋಟಿ</p></li><li><p>ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರ 5 ಹುದ್ದೆಗಳನ್ನು ಇಲಾಖೆಯ ಹೆಚ್ಚುವರಿ ನಿರ್ದೇಶಕರೆಂದು ಉನ್ನತೀಕರಿಸಿ ಹೆಚ್ಚುವರಿ ನಿರ್ದೇಶಕರ ವೃಂದ ಬಲವನ್ನು 13 ರಿಂದ 18 ಕ್ಕೆ ಹೆಚ್ಚಿಸಲು ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಸೇವೆ(ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಲಕಿಯರು ಗರ್ಭಧರಿಸುವುದನ್ನು ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಂಬಂಧ ಚರ್ಚೆ ನಡೆಸಲಾಯಿತು. ಇದಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದರು.</p>.<p>18 ವರ್ಷಗಳ ಒಳಗಿನ ಬಾಲಕಿಯರು ಗರ್ಭಧರಿಸಿದಾಗ ಅವರ ರಕ್ಷಣೆ, ವೈದ್ಯಕೀಯ ನೆರವು ಮತ್ತು ಮನೋಸ್ಥೈರ್ಯ ಹೆಚ್ಚಿಸಲು ಮತ್ತು ಕಾನೂನಾತ್ಮಕ ಕ್ರಮ ಜರುಗಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮಧ್ಯೆ ಸಮನ್ವಯದ ಅಗತ್ಯವೂ ಇದೆ. ಇದಕ್ಕಾಗಿ ನಿಯಮಾವಳಿ ರೂಪಿಸಲಾಗುವುದು ಎಂದು ಹೇಳಿದರು.</p>.<p><strong>ಗ್ರಾಮಗಳಿಗೆ ಸೌರ ಬೀದಿ ದೀಪ:</strong></p>.<p>‘ಹೊಂಬೆಳಕು’ ಯೋಜನೆಯಡಿ 50 ಗ್ರಾಮಗಳಲ್ಲಿ ₹25 ಕೋಟಿ ವೆಚ್ಚದಲ್ಲಿ ಸೌರ ಬೀದಿ ದೀಪ ಅಳವಡಿಸಲು ಒಪ್ಪಿಗೆ ನೀಡಲಾಗಿದೆ. ಈ ವರ್ಷ ₹10 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.</p>.<p><strong>ಕ್ರಯಪತ್ರ ಕಾಲಾವಧಿ ಇಳಿಕೆ:</strong></p>.<p>ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಲೀಸ್ ಕಂ ಸೇಲ್ ಆಧಾರದಲ್ಲಿ ಹಂಚಿಕೆಯಾದ ಮಳಿಗೆ ಮತ್ತು ನಿವೇಶನಗಳ ಕ್ರಯಪತ್ರ ನೀಡುವ ಕನಿಷ್ಠ ಕಾಲಾವಧಿ 10 ವರ್ಷಗಳಿಂದ 2 ವರ್ಷಗಳಿಗೆ ಇಳಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.</p>.<p><strong>ಹಣಕಾಸು ಆಯೋಗಕ್ಕೆ ಜ್ಞಾಪನ ಪತ್ರ:</strong></p>.<p>16 ನೇ ಕೇಂದ್ರ ಹಣಕಾಸು ಆಯೋಗಕ್ಕೆ ಜ್ಞಾಪನ ಪತ್ರವನ್ನು ಸಲ್ಲಿಸಲು ತೀರ್ಮಾನಿಸಲಾಗಿದ್ದು. ಜ್ಞಾಪನ ಪತ್ರವನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯರಿಗೆ ಅಧಿಕಾರ ನೀಡಲಾಗಿದೆ ಎಂದು ಪಾಟೀಲ ತಿಳಿಸಿದರು.</p>.<p><strong>ಪ್ರಮುಖ ತೀರ್ಮಾನಗಳು</strong></p><ul><li><p>₹85 ಕೋಟಿ ವೆಚ್ಚದಲ್ಲಿ 592 ಅಂಗನವಾಡಿ ಕೇಂದ್ರಗಳು ನಿರ್ಮಾಣ</p></li><li><p>ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಹಾರ ಪೂರೈಕೆ ಮಾಡಲು ಜಿಲ್ಲಾವಾರು ಟೆಂಡರ್ ಆಹ್ವಾನಿಸಲು ಒಪ್ಪಿಗೆ</p></li><li><p>ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಚಿಕ್ಕಲಪರ್ವಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ₹397.50 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಒಪ್ಪಿಗೆ</p></li><li><p>ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ವೇಗಗೊಳಿಸುವ ಕೇಂದ್ರ ಸರ್ಕಾರದ(ಆರ್ಎಎಂಪಿ) ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ. ಇದರಲ್ಲಿ ಕೇಂದ್ರದ ಪಾಲು ₹118.72 ಕೋಟಿ ಮತ್ತು ರಾಜ್ಯದ ಪಾಲು ₹147.87 ಕೋಟಿ</p></li><li><p>ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರ 5 ಹುದ್ದೆಗಳನ್ನು ಇಲಾಖೆಯ ಹೆಚ್ಚುವರಿ ನಿರ್ದೇಶಕರೆಂದು ಉನ್ನತೀಕರಿಸಿ ಹೆಚ್ಚುವರಿ ನಿರ್ದೇಶಕರ ವೃಂದ ಬಲವನ್ನು 13 ರಿಂದ 18 ಕ್ಕೆ ಹೆಚ್ಚಿಸಲು ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಸೇವೆ(ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>