<p>ವಿಜಯಪುರ: ರಾಜ್ಯದಹಲವು ಸಕ್ಕರೆ ಕಾರ್ಖಾನೆಗಳಿಗೆ ಬುಧವಾರ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿ ತೂಕದಲ್ಲಿನ ಮೋಸದ ಕುರಿತು ತಪಾಸಣೆ ನಡೆಸಿದರು.</p>.<p>ವಿಜಯಪುರದ ಆಲಮೇಲದ ಕೆಪಿಆರ್ ಸಕ್ಕರೆ ಕಾರ್ಖಾನೆ, ಹಾವಿನಾಳದ ಇಂಡಿಯನ್ ಸಕ್ಕರೆ ಕಾರ್ಖಾನೆ, ನಾದ ಕೆ.ಡಿ.ಯ ಜಮಖಂಡಿ ಸಕ್ಕರೆ ಕಾರ್ಖಾನೆ ಮತ್ತು ಕಾರಜೋಳದ ಬಸವೇಶ್ವರ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಆಹಾರ ಇಲಾಖೆ, ಪೊಲೀಸ್, ಕೆಎಸ್ಎಫ್ಸಿ ಸಿಬ್ಬಂದಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಯಾವೊಂದು ಕಾರ್ಖಾನೆಯಲ್ಲೂ ತೂಕ, ಅಳತೆಯಲ್ಲಿ ಮೋಸವಾಗುತ್ತಿರುವುದು ತಪಾಸಣೆ ವೇಳೆ ಕಂಡುಬಂದಿಲ್ಲ ಎಂದು ವಿಜಯಪುರ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.</p>.<p><strong>ಹಳಿಯಾಳದಲ್ಲೂ ದಾಳಿ:</strong></p>.<p>ಹಳಿಯಾಳದ ಇ.ಐ.ಡಿ. ಪ್ಯಾರಿ ಸಕ್ಕರೆ ಕಾರ್ಖಾನೆ ಮೇಲೆ ದಾಳಿ ನಡೆಸಿ ತೂಕ ವ್ಯತ್ಯಾಸದ ಕುರಿತು ಪರಿಶೀಲನೆ ನಡೆಸಲಾಗಿದೆ. ಆದರೆ, ಅಳತೆಯಲ್ಲಿ ವಂಚಿಸುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಪರಿಶೀಲನೆ ಮುಂದುವರೆಸಿದ್ದೇವೆ' ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ರಾಜ್ಯದಹಲವು ಸಕ್ಕರೆ ಕಾರ್ಖಾನೆಗಳಿಗೆ ಬುಧವಾರ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿ ತೂಕದಲ್ಲಿನ ಮೋಸದ ಕುರಿತು ತಪಾಸಣೆ ನಡೆಸಿದರು.</p>.<p>ವಿಜಯಪುರದ ಆಲಮೇಲದ ಕೆಪಿಆರ್ ಸಕ್ಕರೆ ಕಾರ್ಖಾನೆ, ಹಾವಿನಾಳದ ಇಂಡಿಯನ್ ಸಕ್ಕರೆ ಕಾರ್ಖಾನೆ, ನಾದ ಕೆ.ಡಿ.ಯ ಜಮಖಂಡಿ ಸಕ್ಕರೆ ಕಾರ್ಖಾನೆ ಮತ್ತು ಕಾರಜೋಳದ ಬಸವೇಶ್ವರ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಆಹಾರ ಇಲಾಖೆ, ಪೊಲೀಸ್, ಕೆಎಸ್ಎಫ್ಸಿ ಸಿಬ್ಬಂದಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಯಾವೊಂದು ಕಾರ್ಖಾನೆಯಲ್ಲೂ ತೂಕ, ಅಳತೆಯಲ್ಲಿ ಮೋಸವಾಗುತ್ತಿರುವುದು ತಪಾಸಣೆ ವೇಳೆ ಕಂಡುಬಂದಿಲ್ಲ ಎಂದು ವಿಜಯಪುರ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.</p>.<p><strong>ಹಳಿಯಾಳದಲ್ಲೂ ದಾಳಿ:</strong></p>.<p>ಹಳಿಯಾಳದ ಇ.ಐ.ಡಿ. ಪ್ಯಾರಿ ಸಕ್ಕರೆ ಕಾರ್ಖಾನೆ ಮೇಲೆ ದಾಳಿ ನಡೆಸಿ ತೂಕ ವ್ಯತ್ಯಾಸದ ಕುರಿತು ಪರಿಶೀಲನೆ ನಡೆಸಲಾಗಿದೆ. ಆದರೆ, ಅಳತೆಯಲ್ಲಿ ವಂಚಿಸುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಪರಿಶೀಲನೆ ಮುಂದುವರೆಸಿದ್ದೇವೆ' ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>