<figcaption>""</figcaption>.<p><strong>ಬೆಂಗಳೂರು:</strong> ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಲು ನಾಗರಿಕರು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಉದಾರವಾಗಿ ದೇಣಿಗೆ ನೀಡಬೇಕು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ವಿನಂತಿಸಿದ್ದಾರೆ.</p>.<p>ಈ ಕುರಿತು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಅವರು, ‘ಕೊರೊನಾ ವೈರಸ್ನಿಂದಾಗಿ ವಿಶ್ವದೆಲ್ಲೆಡೆ ಗಣನೀಯ ಪ್ರಮಾಣದಲ್ಲಿ ಜನ ಸಾವಿಗೀಡಾಗುತ್ತಿದ್ದಾರೆ. ಕರ್ನಾಟಕದಲ್ಲೂ ಈ ಸೋಂಕು ಕಾಣಿಸಿಕೊಂಡಿದೆ. ಇದರ ವಿರುದ್ಧ ಸರ್ಕಾರ ಹೋರಾಡುತ್ತಿದೆ. ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರ ಮಾಡುತ್ತಿದ್ದು, ರೋಗ ಪತ್ತೆಗೆ ಪ್ರಯೋಗಾಲಯಗಳನ್ನೂ ಸ್ಥಾಪಿಸಿದೆ. ಸರ್ಕಾರದ ಈ ಹೋರಾಟದಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕು. ಇದಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು,’ ಎಂದು ಅವರು ಮನವಿ ಮಾಡಿದ್ದಾರೆ.</p>.<p>ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಲು ದೇಣಿಗೆ ಸಲ್ಲಿಸುವವರು ಆದಾಯ ತೆರಿಗೆಯಿಂದಲೂ ವಿನಾಯಿತಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆ ವಿವರ</strong></p>.<p>ಖಾತೆ ಹೆಸರು: Chief ministers relief fund covid 19<br />ಬ್ಯಾಂಕ್ ಹೆಸರು: ಎಸ್ಬಿಐ<br />ಶಾಖೆ: ವಿಧಾನಸೌಧ<br />ಖಾತೆ ಸಂಖ್ಯೆ: 39234923151<br />ಐಎಫ್ಎಸ್ಸಿ ಕೋಡ್: SBIN0040277<br />ಐಎಂಸಿಆರ್ ಸಂಖ್ಯೆ: 560002419<br />ಚೆಕ್/ ಡಿಸಿ ಕಳುಹಿಸಿಕೊಡಬೇಕಾದ ವಿಳಾಸ: ನಂ.235–ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು– 01</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಲು ನಾಗರಿಕರು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಉದಾರವಾಗಿ ದೇಣಿಗೆ ನೀಡಬೇಕು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ವಿನಂತಿಸಿದ್ದಾರೆ.</p>.<p>ಈ ಕುರಿತು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಅವರು, ‘ಕೊರೊನಾ ವೈರಸ್ನಿಂದಾಗಿ ವಿಶ್ವದೆಲ್ಲೆಡೆ ಗಣನೀಯ ಪ್ರಮಾಣದಲ್ಲಿ ಜನ ಸಾವಿಗೀಡಾಗುತ್ತಿದ್ದಾರೆ. ಕರ್ನಾಟಕದಲ್ಲೂ ಈ ಸೋಂಕು ಕಾಣಿಸಿಕೊಂಡಿದೆ. ಇದರ ವಿರುದ್ಧ ಸರ್ಕಾರ ಹೋರಾಡುತ್ತಿದೆ. ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರ ಮಾಡುತ್ತಿದ್ದು, ರೋಗ ಪತ್ತೆಗೆ ಪ್ರಯೋಗಾಲಯಗಳನ್ನೂ ಸ್ಥಾಪಿಸಿದೆ. ಸರ್ಕಾರದ ಈ ಹೋರಾಟದಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕು. ಇದಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು,’ ಎಂದು ಅವರು ಮನವಿ ಮಾಡಿದ್ದಾರೆ.</p>.<p>ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಲು ದೇಣಿಗೆ ಸಲ್ಲಿಸುವವರು ಆದಾಯ ತೆರಿಗೆಯಿಂದಲೂ ವಿನಾಯಿತಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆ ವಿವರ</strong></p>.<p>ಖಾತೆ ಹೆಸರು: Chief ministers relief fund covid 19<br />ಬ್ಯಾಂಕ್ ಹೆಸರು: ಎಸ್ಬಿಐ<br />ಶಾಖೆ: ವಿಧಾನಸೌಧ<br />ಖಾತೆ ಸಂಖ್ಯೆ: 39234923151<br />ಐಎಫ್ಎಸ್ಸಿ ಕೋಡ್: SBIN0040277<br />ಐಎಂಸಿಆರ್ ಸಂಖ್ಯೆ: 560002419<br />ಚೆಕ್/ ಡಿಸಿ ಕಳುಹಿಸಿಕೊಡಬೇಕಾದ ವಿಳಾಸ: ನಂ.235–ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು– 01</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>