<p><strong>ಚಿತ್ರದುರ್ಗ:</strong> ಜೆಡಿಎಸ್-ಕಾಂಗ್ರೆಸ್ ನಡುವೆ ಹೊಂದಾಣಿಕೆ ಇದ್ದು, ಯಾವುದೇ ಗೊಂದಲ ಇಲ್ಲ. ಸಮ್ಮಿಶ್ರ ಸರ್ಕಾರ ಟೇಕ್ಆಫ್ ಆಗಲು ಸಮಯ ಹಿಡಿಯುತ್ತದೆ ಎಂದು ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.</p>.<p>ಇಲ್ಲಿನ ಕೆಒಎಫ್ಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಬಜೆಟ್ ನಂತರ ಸರ್ಕಾರ ಟೇಕ್ಆಫ್ ಆಗಲಿದೆ. ಮಾಧ್ಯಮದ ಸ್ನೇಹಿತರು ಎಕ್ಸರೇ ಕಣ್ಣಿನಿಂದ ನೋಡಿದ್ರೆ ಹೀಗಾಗುತ್ತೆ. ಕನ್ನಡಕ ತೆಗೆದು ನೋಡಿ. ಊಹಾಪೋಹಗಳಿಗೆ ಉತ್ತರ ನೀಡಲು ಸಾಧ್ಯವಿಲ್ಲ’ ಎಂದರು.</p>.<p>‘ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಜತೆ ಇದ್ದಾರೆ. ಅಗತ್ಯ ಸಲಹೆ ಸೂಚನೆ ನೀಡಲಿದ್ದು, ಸರ್ಕಾರ ಐದು ವರ್ಷ ಅಧಿಕಾರ ಪೂರೈಸುತ್ತೇವೆ. ಬಜೆಟ್ಗಿಂತ ಮೊದಲು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆಗುತ್ತದೆ. ಬಳಿಕ ಅಭಿವೃದ್ಧಿ ಕೆಲಸಗಳು ವೇಗ ಪಡೆಯಲಿವೆ’ ಎಂದರು.</p>.<p>‘ಬಿಜೆಪಿ ನಾಯಕರು ಕಾನೂನು ತಿಳಿದುಕೊಂಡು ಮಾತನಾಡಬೇಕು. ನಮ್ಮ ಸಂಪರ್ಕದಲ್ಲಿ ಶಾಸಕರಿದ್ದಾರೆಂದು ಸುಳ್ಳು ಹೇಳುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>‘ದೇಸಿ ಹಸುಗಳ ಬೆಳವಣಿಗೆಗೆ ಒತ್ತು ನೀಡುತ್ತೇವೆ. ಹೆಚ್ಚು ಹಾಲು ಕೊಡುವ ಸ್ಥಳೀಯ ಹಸುಗಳಾದ ದೇವಣಿ ತಳಿ ಅಭಿವೃದ್ಧಿಗೆ ಬಳ್ಳಾರಿ ಬಳಿ ಫಾರ್ಮ್ ಮಾಡುವ ಚಿಂತನೆ ಇದೆ. ಇಸ್ರೇಲ್ ಮಾದರಿಯಲ್ಲಿ ಹೈಡ್ರೋಪೋನಿಕ್ ಸಿಸ್ಟಂ ಅಳವಡಿಸಲು ಬಜೆಟ್ನಲ್ಲಿಪೈಲಟ್ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದೆ’ ಎಂದರು.</p>.<p>ರಾಜ್ಯದಲ್ಲಿ ಇಲಾಖೆಯ ಜಮೀನು ಒತ್ತುವರಿಯಾಗಿದ್ದು, ಬಜೆಟ್ ಬಳಿಕ ಕಂದಾಯ ಸಚಿವರು ಜತೆ ಚರ್ಚಿಸಿ ಸರ್ವೇ ನಡೆಸಿ, ಒತ್ತುವರಿ ತೆರವುಗೊಳಿಸಲಾಗುತ್ತದೆ ಎಂದು ಹೇಳಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಜೆಡಿಎಸ್-ಕಾಂಗ್ರೆಸ್ ನಡುವೆ ಹೊಂದಾಣಿಕೆ ಇದ್ದು, ಯಾವುದೇ ಗೊಂದಲ ಇಲ್ಲ. ಸಮ್ಮಿಶ್ರ ಸರ್ಕಾರ ಟೇಕ್ಆಫ್ ಆಗಲು ಸಮಯ ಹಿಡಿಯುತ್ತದೆ ಎಂದು ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.</p>.<p>ಇಲ್ಲಿನ ಕೆಒಎಫ್ಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಬಜೆಟ್ ನಂತರ ಸರ್ಕಾರ ಟೇಕ್ಆಫ್ ಆಗಲಿದೆ. ಮಾಧ್ಯಮದ ಸ್ನೇಹಿತರು ಎಕ್ಸರೇ ಕಣ್ಣಿನಿಂದ ನೋಡಿದ್ರೆ ಹೀಗಾಗುತ್ತೆ. ಕನ್ನಡಕ ತೆಗೆದು ನೋಡಿ. ಊಹಾಪೋಹಗಳಿಗೆ ಉತ್ತರ ನೀಡಲು ಸಾಧ್ಯವಿಲ್ಲ’ ಎಂದರು.</p>.<p>‘ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಜತೆ ಇದ್ದಾರೆ. ಅಗತ್ಯ ಸಲಹೆ ಸೂಚನೆ ನೀಡಲಿದ್ದು, ಸರ್ಕಾರ ಐದು ವರ್ಷ ಅಧಿಕಾರ ಪೂರೈಸುತ್ತೇವೆ. ಬಜೆಟ್ಗಿಂತ ಮೊದಲು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆಗುತ್ತದೆ. ಬಳಿಕ ಅಭಿವೃದ್ಧಿ ಕೆಲಸಗಳು ವೇಗ ಪಡೆಯಲಿವೆ’ ಎಂದರು.</p>.<p>‘ಬಿಜೆಪಿ ನಾಯಕರು ಕಾನೂನು ತಿಳಿದುಕೊಂಡು ಮಾತನಾಡಬೇಕು. ನಮ್ಮ ಸಂಪರ್ಕದಲ್ಲಿ ಶಾಸಕರಿದ್ದಾರೆಂದು ಸುಳ್ಳು ಹೇಳುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>‘ದೇಸಿ ಹಸುಗಳ ಬೆಳವಣಿಗೆಗೆ ಒತ್ತು ನೀಡುತ್ತೇವೆ. ಹೆಚ್ಚು ಹಾಲು ಕೊಡುವ ಸ್ಥಳೀಯ ಹಸುಗಳಾದ ದೇವಣಿ ತಳಿ ಅಭಿವೃದ್ಧಿಗೆ ಬಳ್ಳಾರಿ ಬಳಿ ಫಾರ್ಮ್ ಮಾಡುವ ಚಿಂತನೆ ಇದೆ. ಇಸ್ರೇಲ್ ಮಾದರಿಯಲ್ಲಿ ಹೈಡ್ರೋಪೋನಿಕ್ ಸಿಸ್ಟಂ ಅಳವಡಿಸಲು ಬಜೆಟ್ನಲ್ಲಿಪೈಲಟ್ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದೆ’ ಎಂದರು.</p>.<p>ರಾಜ್ಯದಲ್ಲಿ ಇಲಾಖೆಯ ಜಮೀನು ಒತ್ತುವರಿಯಾಗಿದ್ದು, ಬಜೆಟ್ ಬಳಿಕ ಕಂದಾಯ ಸಚಿವರು ಜತೆ ಚರ್ಚಿಸಿ ಸರ್ವೇ ನಡೆಸಿ, ಒತ್ತುವರಿ ತೆರವುಗೊಳಿಸಲಾಗುತ್ತದೆ ಎಂದು ಹೇಳಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>