<p><strong>ಬೆಂಗಳೂರು:</strong> ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅಪೂರ್ಣ ಭಾಷಣ ಹಾಗೂ ಅವರು ಸದನದಿಂದ ತೆರಳುವಾಗ ಕಾಂಗ್ರೆಸ್ ಸದಸ್ಯರು ನಡೆಸಿದ ಗದ್ದಲದ ವಿಷಯ ಬುಧವಾರವೂ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆಗೆ ಕಾರಣವಾಯಿತು.</p>.<p>ಲೋಕಭವನ ಮತ್ತು ಆರ್ಎಸ್ಎಸ್ ಕಚೇರಿಗಳ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಆರೋಪಿಸಿದರು. ರಾಜ್ಯಪಾಲರ ನಡವಳಿಕೆ ಪರ ಮತ್ತು ವಿರುದ್ಧವಾಗಿ ಎರಡು ದಿನ ಉಭಯ ಸದನಗಳಲ್ಲೂ ವಾಗ್ವಾದ ನಡೆಯಿತು. ಈ ಬಗ್ಗೆ ತಮ್ಮ ಸದನಗಳಲ್ಲಿ ಪ್ರತ್ಯೇಕವಾಗಿ ರೂಲಿಂಗ್ ನೀಡಿದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ‘ರಾಜ್ಯಪಾಲರ ಹೆಸರು ಬಳಸಿ ಚರ್ಚೆ ನಡೆಸುವಂತಿಲ್ಲ’ ಎಂದು ತಾಕೀತು ಮಾಡಿದರು.</p>.<p>ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ನ ಎ.ಎಸ್.ಪೊನ್ನಣ್ಣ ಮತ್ತು ಪ್ರದೀಪ್ ಈಶ್ವರ್ ಅವರು ರಾಜ್ಯಪಾಲರನ್ನು ನಿಂದಿಸುವುದಕ್ಕೆ ಚರ್ಚೆಯನ್ನು ಸೀಮಿತವಾಗಿ ಮಾತನಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ರಾಜ್ಯಪಾಲರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪ್ರತ್ಯಾರೋಪ ಮಾಡಿದರು.</p>.<p>ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ರಾಜ್ಯಪಾಲರು ರಾಷ್ಟ್ರಗೀತೆಗೆ ನಿಲ್ಲಲಿಲ್ಲ. ಅವರು ಸಂವಿಧಾನದ ಪ್ರಕಾರ ನಡೆದುಕೊಳ್ಳಲಿಲ್ಲ. ಇಷ್ಟಾದರೂ ನಾವು ರಾಜ್ಯಪಾಲರನ್ನು ನಗುತ್ತಲೇ ಬೀಳ್ಕೊಟ್ಟು, ಧನ್ಯವಾದ ಹೇಳಿದ್ದೇವೆ’ ಎಂದರು.</p>.<p>‘ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯದ ಬದಲಿಗೆ ಖಂಡನಾ ನಿರ್ಣಯದ ಮೂಲಕ ರಾಜ್ಯಪಾಲರಿಗೆ ಅಗೌರವ ತೋರಿಸಿದ್ದಾರೆ. ಆದ್ದರಿಂದ ಈ ಕುರಿತು ಸರ್ಕಾರ ಕ್ಷಮೆ ಯಾಚಿಸಬೇಕು. ರಾಜ್ಯಪಾಲರನ್ನು ಅಡ್ಡಗಟ್ಟಿದ ಬಿ.ಕೆ.ಹರಿಪ್ರಸಾದ್, ಶರತ್ ಬಚ್ಚೇಗೌಡ, ಎಸ್.ರವಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಅಶೋಕ ಪಟ್ಟು ಹಿಡಿದರು. ಆ ವೇಳೆ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಶೋಕ ಅವರನ್ನು ಬೆಂಬಲಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅಪೂರ್ಣ ಭಾಷಣ ಹಾಗೂ ಅವರು ಸದನದಿಂದ ತೆರಳುವಾಗ ಕಾಂಗ್ರೆಸ್ ಸದಸ್ಯರು ನಡೆಸಿದ ಗದ್ದಲದ ವಿಷಯ ಬುಧವಾರವೂ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆಗೆ ಕಾರಣವಾಯಿತು.</p>.<p>ಲೋಕಭವನ ಮತ್ತು ಆರ್ಎಸ್ಎಸ್ ಕಚೇರಿಗಳ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಆರೋಪಿಸಿದರು. ರಾಜ್ಯಪಾಲರ ನಡವಳಿಕೆ ಪರ ಮತ್ತು ವಿರುದ್ಧವಾಗಿ ಎರಡು ದಿನ ಉಭಯ ಸದನಗಳಲ್ಲೂ ವಾಗ್ವಾದ ನಡೆಯಿತು. ಈ ಬಗ್ಗೆ ತಮ್ಮ ಸದನಗಳಲ್ಲಿ ಪ್ರತ್ಯೇಕವಾಗಿ ರೂಲಿಂಗ್ ನೀಡಿದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ‘ರಾಜ್ಯಪಾಲರ ಹೆಸರು ಬಳಸಿ ಚರ್ಚೆ ನಡೆಸುವಂತಿಲ್ಲ’ ಎಂದು ತಾಕೀತು ಮಾಡಿದರು.</p>.<p>ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ನ ಎ.ಎಸ್.ಪೊನ್ನಣ್ಣ ಮತ್ತು ಪ್ರದೀಪ್ ಈಶ್ವರ್ ಅವರು ರಾಜ್ಯಪಾಲರನ್ನು ನಿಂದಿಸುವುದಕ್ಕೆ ಚರ್ಚೆಯನ್ನು ಸೀಮಿತವಾಗಿ ಮಾತನಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ರಾಜ್ಯಪಾಲರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪ್ರತ್ಯಾರೋಪ ಮಾಡಿದರು.</p>.<p>ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ರಾಜ್ಯಪಾಲರು ರಾಷ್ಟ್ರಗೀತೆಗೆ ನಿಲ್ಲಲಿಲ್ಲ. ಅವರು ಸಂವಿಧಾನದ ಪ್ರಕಾರ ನಡೆದುಕೊಳ್ಳಲಿಲ್ಲ. ಇಷ್ಟಾದರೂ ನಾವು ರಾಜ್ಯಪಾಲರನ್ನು ನಗುತ್ತಲೇ ಬೀಳ್ಕೊಟ್ಟು, ಧನ್ಯವಾದ ಹೇಳಿದ್ದೇವೆ’ ಎಂದರು.</p>.<p>‘ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯದ ಬದಲಿಗೆ ಖಂಡನಾ ನಿರ್ಣಯದ ಮೂಲಕ ರಾಜ್ಯಪಾಲರಿಗೆ ಅಗೌರವ ತೋರಿಸಿದ್ದಾರೆ. ಆದ್ದರಿಂದ ಈ ಕುರಿತು ಸರ್ಕಾರ ಕ್ಷಮೆ ಯಾಚಿಸಬೇಕು. ರಾಜ್ಯಪಾಲರನ್ನು ಅಡ್ಡಗಟ್ಟಿದ ಬಿ.ಕೆ.ಹರಿಪ್ರಸಾದ್, ಶರತ್ ಬಚ್ಚೇಗೌಡ, ಎಸ್.ರವಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಅಶೋಕ ಪಟ್ಟು ಹಿಡಿದರು. ಆ ವೇಳೆ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಶೋಕ ಅವರನ್ನು ಬೆಂಬಲಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>