<p><strong>ಬೆಂಗಳೂರು</strong>: ಜನವರಿ 22ರಿಂದ (ಗುರುವಾರ) ಆರಂಭವಾಗುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರಾಕರಿಸಿದ್ದಾರೆ.</p><p>ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಓದುವ ಮೂಲಕ ವರ್ಷದ ಕಲಾಪಕ್ಕೆ ಚಾಲನೆ ನೀಡುತ್ತಾರೆ. ಬೆಳಿಗ್ಗೆ11 ಗಂಟೆಗೆ ಈ ಭಾಷಣ ನಿಗದಿಯಾಗಿದೆ. ಜಂಟಿ ಅಧಿವೇಶನದ ಜತೆಜತೆಗೆ ನರೇಗಾ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿರುವ ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನೂ ಸರ್ಕಾರ ಕರೆದಿದೆ.</p><p>ಬುಧವಾರ ಬೆಳಿಗ್ಗೆಯೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿದ್ದ ಲೋಕಭವನದ ಅಧಿಕಾರಿಗಳು, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಕೈಗೊಳ್ಳುವುದಾದರೆ ರಾಜ್ಯಪಾಲರು ಭಾಗವಹಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು ಎಂದು ಮೂಲಗಳು ಹೇಳಿವೆ.</p><p>ಈ ಬೆಳವಣಿಗೆ ಬೆನ್ನಲ್ಲೇ, ಕಾನೂನು ಸಚಿವ ಎಚ್.ಕೆ. ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜ್ಯಪಾಲರ ಜತೆ ಚರ್ಚಿಸಿ, ಮನವರಿಕೆ ಮಾಡಲು ಲೋಕಭವನಕ್ಕೆ ತೆರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನವರಿ 22ರಿಂದ (ಗುರುವಾರ) ಆರಂಭವಾಗುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರಾಕರಿಸಿದ್ದಾರೆ.</p><p>ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಓದುವ ಮೂಲಕ ವರ್ಷದ ಕಲಾಪಕ್ಕೆ ಚಾಲನೆ ನೀಡುತ್ತಾರೆ. ಬೆಳಿಗ್ಗೆ11 ಗಂಟೆಗೆ ಈ ಭಾಷಣ ನಿಗದಿಯಾಗಿದೆ. ಜಂಟಿ ಅಧಿವೇಶನದ ಜತೆಜತೆಗೆ ನರೇಗಾ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿರುವ ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನೂ ಸರ್ಕಾರ ಕರೆದಿದೆ.</p><p>ಬುಧವಾರ ಬೆಳಿಗ್ಗೆಯೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿದ್ದ ಲೋಕಭವನದ ಅಧಿಕಾರಿಗಳು, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಕೈಗೊಳ್ಳುವುದಾದರೆ ರಾಜ್ಯಪಾಲರು ಭಾಗವಹಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು ಎಂದು ಮೂಲಗಳು ಹೇಳಿವೆ.</p><p>ಈ ಬೆಳವಣಿಗೆ ಬೆನ್ನಲ್ಲೇ, ಕಾನೂನು ಸಚಿವ ಎಚ್.ಕೆ. ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜ್ಯಪಾಲರ ಜತೆ ಚರ್ಚಿಸಿ, ಮನವರಿಕೆ ಮಾಡಲು ಲೋಕಭವನಕ್ಕೆ ತೆರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>