<p><strong>ಬೆಂಗಳೂರು</strong>: ‘ಮುಡಾ ಹಗರಣ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಮನವಿ ಮಾಡಿದವರ ಹಿನ್ನೆಲೆಯನ್ನು ರಾಜ್ಯಪಾಲರು ಪರಿಶೀಲಿಸಬೇಕು’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಶನಿವಾರ ಆಗ್ರಹಿಸಿದರು.</p>.<p>ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ಎಲ್. ಶಂಕರ್, ಮುಖ್ಯಮಂತ್ರಿಯ ಸಲಹೆಗಾರ ಬಿ.ಆರ್. ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಎಲ್. ಹನುಮಂತಯ್ಯ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ–ಜೆಡಿಎಸ್ನವರ ರೀತಿಯಲ್ಲಿ ರಾಜ್ಯಪಾಲರು ನಡೆದುಕೊಂಡರೆ ಅದು ಸಂವಿಧಾನಕ್ಕೆ ಮಾಡುವ ಅಪಚಾರ’ ಎಂದಿದ್ದಾರೆ.</p>.<p>‘ಮುಡಾ ವಿಷಯ ಕುರಿತು ಸಿ.ಎಂ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ 50:50 ಅನುಪಾತದಲ್ಲಿ ನಿವೇಶನ ನೀಡಿರುವುದು ತಪ್ಪಾಗಿದ್ದರೆ, ಯಾರ ಕಾಲದಲ್ಲಿ ಆಗಿದೆ ಎಂಬುದನ್ನು ನೋಡಬೇಕು. ಅದಕ್ಕೆ ಕಾರಣರಾದವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂದು ಬಿ.ಎಲ್. ಶಂಕರ್ ಒತ್ತಾಯಿಸಿದರು.</p>.<p>ಬಿ. ಆರ್.ಪಾಟೀಲ ಅವರು, ‘ಹಿಂದೆ ಎರಡು ಬಾರಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದ್ದ ಬಿಜೆಪಿ, ಮೂರನೇ ಬಾರಿಯೂ ಅದೇ ಕೆಲಸಕ್ಕೆ ಕೈ ಹಾಕಿದೆ. ನಾವು ಬಿಜೆಪಿಯ ಬೆದರಿಕೆಗಳಿಗೆ ಜಗ್ಗುವುದಿಲ್ಲ’ ಎಂದರು.</p>.<p>ಎಲ್. ಹನುಮಂತಯ್ಯ ಮತ್ತು ಉಗ್ರಪ್ಪ ಅವರೂ ಬಿಜೆಪಿ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಡಾ ಹಗರಣ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಮನವಿ ಮಾಡಿದವರ ಹಿನ್ನೆಲೆಯನ್ನು ರಾಜ್ಯಪಾಲರು ಪರಿಶೀಲಿಸಬೇಕು’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಶನಿವಾರ ಆಗ್ರಹಿಸಿದರು.</p>.<p>ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ಎಲ್. ಶಂಕರ್, ಮುಖ್ಯಮಂತ್ರಿಯ ಸಲಹೆಗಾರ ಬಿ.ಆರ್. ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಎಲ್. ಹನುಮಂತಯ್ಯ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ–ಜೆಡಿಎಸ್ನವರ ರೀತಿಯಲ್ಲಿ ರಾಜ್ಯಪಾಲರು ನಡೆದುಕೊಂಡರೆ ಅದು ಸಂವಿಧಾನಕ್ಕೆ ಮಾಡುವ ಅಪಚಾರ’ ಎಂದಿದ್ದಾರೆ.</p>.<p>‘ಮುಡಾ ವಿಷಯ ಕುರಿತು ಸಿ.ಎಂ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ 50:50 ಅನುಪಾತದಲ್ಲಿ ನಿವೇಶನ ನೀಡಿರುವುದು ತಪ್ಪಾಗಿದ್ದರೆ, ಯಾರ ಕಾಲದಲ್ಲಿ ಆಗಿದೆ ಎಂಬುದನ್ನು ನೋಡಬೇಕು. ಅದಕ್ಕೆ ಕಾರಣರಾದವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂದು ಬಿ.ಎಲ್. ಶಂಕರ್ ಒತ್ತಾಯಿಸಿದರು.</p>.<p>ಬಿ. ಆರ್.ಪಾಟೀಲ ಅವರು, ‘ಹಿಂದೆ ಎರಡು ಬಾರಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದ್ದ ಬಿಜೆಪಿ, ಮೂರನೇ ಬಾರಿಯೂ ಅದೇ ಕೆಲಸಕ್ಕೆ ಕೈ ಹಾಕಿದೆ. ನಾವು ಬಿಜೆಪಿಯ ಬೆದರಿಕೆಗಳಿಗೆ ಜಗ್ಗುವುದಿಲ್ಲ’ ಎಂದರು.</p>.<p>ಎಲ್. ಹನುಮಂತಯ್ಯ ಮತ್ತು ಉಗ್ರಪ್ಪ ಅವರೂ ಬಿಜೆಪಿ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>