<p><strong>ಬೆಂಗಳೂರು:</strong> ನಮ್ಮ ಪರಂಪರೆ, ಸಂಸ್ಕೃತಿ, ಸಂಪ್ರದಾಯಗಳನ್ನು ಸಂರಕ್ಷಿಸುವುದರೊಂದಿಗೆ, ಪ್ರಯೋಜನಕ್ಕೆ ಬಾರದ ಕಲ್ಪನೆ, ಮೂಢನಂಬಿಕೆಗಳನ್ನು ತ್ಯಜಿಸುವಂತೆ ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.</p>.<p>71ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಬಗ್ಗೆ ಆಂದೋಲನ ನಡೆಯುತ್ತಿರುವ ಈ ಸಂದರ್ಭದಲ್ಲಿ,ನಾಗರಿಕರಾಗಿ ನಮ್ಮ ಕರ್ತವ್ಯಗಳ ಕುರಿತು ಗಮನಹರಿಸುವುದಕ್ಕೆ ಇದು ಸೂಕ್ತ ಕಾಲವಾಗಿದೆ' ಎಂದರು.</p>.<p>ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಕ್ರಮಗಳ ಕುರಿತೂ ಪ್ರಸ್ತಾಪಿಸಿದರು. ‘ಪ್ರವಾಹದಿಂದ ಸಂಕಷ್ಟಕ್ಕೊಳಗಾದ 2.7 ಲಕ್ಷ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಹಾಕಲಾಗಿದೆ. ತೀವ್ರ ಹಾನಿಗೊಳಗಾದ ಮನೆಗಳ ದುರಸ್ತಿಗೆ ₹5 ಲಕ್ಷ, ಭಾಗಶಃ ಹಾನಿಯಾದ ಮನೆಗಳ ದುರಸ್ತಿಗೆ ₹50 ಸಾವಿರ ನೆರವು ನೀಡಲಾಗಿದೆ’ ಎಂದು ತಿಳಿಸಿದರು.</p>.<p class="Subhead">ಸಾಲಮನ್ನಾ:‘2019–20ನೇ ಸಾಲಿನಲ್ಲಿ ಬೆಳೆ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗಿದ್ದು, ಇದರಿಂದ 21 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಸಹಕಾರಿ ಬ್ಯಾಂಕುಗಳಲ್ಲಿ ₹1 ಲಕ್ಷ,ವಾಣಿಜ್ಯ ಬ್ಯಾಂಕುಗಳಲ್ಲಿ ₹2 ಲಕ್ಷ ವರೆಗಿನ ಸಾಲ ಬಾಕಿಯನ್ನು ಮನ್ನಾ ಮಾಡಲಾಗುತ್ತದೆ’ ಎಂದರು.</p>.<p class="Subhead">ಬರ ತಡೆಯಲು ಯೋಜನೆ:ನರೇಗಾ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಮನ್ವಯಗೊಳಿಸಿ ಆಯ್ದ 100 ಬರಪೀಡಿತ ಹಾಗೂ ಕಡಿಮೆ ಅಂತರ್ಜಲ ಮಟ್ಟ ಹೊಂದಿರುವ ತಾಲ್ಲೂಕುಗಳಲ್ಲಿ ಬರ ತಡೆಯಲು ‘ಜಲಾನಯನ ಅಭಿವೃದ್ಧಿ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಮ್ಮ ಪರಂಪರೆ, ಸಂಸ್ಕೃತಿ, ಸಂಪ್ರದಾಯಗಳನ್ನು ಸಂರಕ್ಷಿಸುವುದರೊಂದಿಗೆ, ಪ್ರಯೋಜನಕ್ಕೆ ಬಾರದ ಕಲ್ಪನೆ, ಮೂಢನಂಬಿಕೆಗಳನ್ನು ತ್ಯಜಿಸುವಂತೆ ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.</p>.<p>71ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಬಗ್ಗೆ ಆಂದೋಲನ ನಡೆಯುತ್ತಿರುವ ಈ ಸಂದರ್ಭದಲ್ಲಿ,ನಾಗರಿಕರಾಗಿ ನಮ್ಮ ಕರ್ತವ್ಯಗಳ ಕುರಿತು ಗಮನಹರಿಸುವುದಕ್ಕೆ ಇದು ಸೂಕ್ತ ಕಾಲವಾಗಿದೆ' ಎಂದರು.</p>.<p>ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಕ್ರಮಗಳ ಕುರಿತೂ ಪ್ರಸ್ತಾಪಿಸಿದರು. ‘ಪ್ರವಾಹದಿಂದ ಸಂಕಷ್ಟಕ್ಕೊಳಗಾದ 2.7 ಲಕ್ಷ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಹಾಕಲಾಗಿದೆ. ತೀವ್ರ ಹಾನಿಗೊಳಗಾದ ಮನೆಗಳ ದುರಸ್ತಿಗೆ ₹5 ಲಕ್ಷ, ಭಾಗಶಃ ಹಾನಿಯಾದ ಮನೆಗಳ ದುರಸ್ತಿಗೆ ₹50 ಸಾವಿರ ನೆರವು ನೀಡಲಾಗಿದೆ’ ಎಂದು ತಿಳಿಸಿದರು.</p>.<p class="Subhead">ಸಾಲಮನ್ನಾ:‘2019–20ನೇ ಸಾಲಿನಲ್ಲಿ ಬೆಳೆ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗಿದ್ದು, ಇದರಿಂದ 21 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಸಹಕಾರಿ ಬ್ಯಾಂಕುಗಳಲ್ಲಿ ₹1 ಲಕ್ಷ,ವಾಣಿಜ್ಯ ಬ್ಯಾಂಕುಗಳಲ್ಲಿ ₹2 ಲಕ್ಷ ವರೆಗಿನ ಸಾಲ ಬಾಕಿಯನ್ನು ಮನ್ನಾ ಮಾಡಲಾಗುತ್ತದೆ’ ಎಂದರು.</p>.<p class="Subhead">ಬರ ತಡೆಯಲು ಯೋಜನೆ:ನರೇಗಾ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಮನ್ವಯಗೊಳಿಸಿ ಆಯ್ದ 100 ಬರಪೀಡಿತ ಹಾಗೂ ಕಡಿಮೆ ಅಂತರ್ಜಲ ಮಟ್ಟ ಹೊಂದಿರುವ ತಾಲ್ಲೂಕುಗಳಲ್ಲಿ ಬರ ತಡೆಯಲು ‘ಜಲಾನಯನ ಅಭಿವೃದ್ಧಿ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>