<p><strong>ಬೆಂಗಳೂರು</strong>: ‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.</p><p>ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿಕೊಂಡು ಬಂದಿದ್ದ ಕೇವಲ ಒಂದು ಪ್ಯಾರಾವನ್ನು ಓದಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ನಿರ್ಗಮಿಸಿದ ಬೆನ್ನಲ್ಲೆ ಸುದ್ದಿಗಾರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಮಾತನಾಡಿದರು.</p><p>‘ರಾಜ್ಯಪಾಲರಿಂದ ಸಂವಿಧಾನದ ಉಲ್ಲಂಘನೆ ಆಗಿದೆ. ಜನಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ರಾಜ್ಯಪಾಲರು ಭಾಷಣ ಮಾಡಬೇಕಿರುವುದು ಸಂವಿಧಾನಬದ್ಧವಾದ ವಿಚಾರ. ಅದನ್ನು ಉಲ್ಲಂಘಿಸಿದ್ದಾರೆ. ನಮ್ಮ ಸರ್ಕಾರ, ಪಕ್ಷ, ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತಾರೆ. ಇಡೀ ರಾಜ್ಯದಲ್ಲಿ ನಾವು ಹೋರಾಟ ಹಮ್ಮಿಕೊಂಡಿದ್ದೇವೆ’ ಎಂದರು.</p>.ಸರ್ಕಾರದ ಭಾಷಣಕ್ಕೆ ಕೊಕ್; ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ.<p>‘ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ಮಾಡಿರುವ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಿಂದ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನದ ಉಲ್ಲಂಘನೆ. ಸಂವಿಧಾನಬಾಹಿರ, ಅವರು ತಮ್ಮ ಕರ್ತವ್ಯ, ಜವಾಬ್ದಾರಿಯನ್ನು ನಿರ್ವಹಿಸಿಲ್ಲ’ ಎಂದು ವಾಗ್ದಾಳಿ ನಡೆಸಿದರು.</p><p>‘ಸರ್ಕಾರ ತಯಾರಿ ಮಾಡಿದ ಭಾಷಣವನ್ನು ಎಲ್ಲ ಶಾಸಕರಿಗೆ, ಪರಿಷತ್ ಸದಸ್ಯರಿಗೆ ನೀಡಿದ್ದೇವೆ’ ಎಂದೂ ಹೇಳಿದರು.</p><p>‘ರಾಜ್ಯಪಾಲರು ಅವರು ಸಿದ್ಧಪಡಿಸಿದ ಭಾಷಣವನ್ನು ಓದುವಂತೆ ಇಲ್ಲ. ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ಅವರ ಭಾಷಣ ಮಾಡಬೇಕು’ ಎಂದರು.</p><p>‘ಕೇಂದ್ರ ಸರ್ಕಾರ ನರೇಗಾ ಕಾಯ್ದೆಯ ಬದಲು, ಹೊಸ ಕಾಯ್ದೆ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದೆ. ಇದಕ್ಕೆ ನಮ್ಮ ಪಕ್ಷ ಮತ್ತು ಸರ್ಕಾರದ ವಿರೋಧವಿದೆ. ಈ ವಿಷಯವನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. ನರೇಗಾ ಮರು ಸ್ಥಾಪನೆ ಮಾಡಬೇಕು. ಹೊಸ ಕಾಯ್ದೆಯನ್ನು ರದ್ದು ಮಾಡಬೇಕು. ನಮ್ಮ ಪಕ್ಷ ಮತ್ತು ಸರ್ಕಾರ ಈ ತೀರ್ಮಾನ ಮಾಡಿದೆ. ನರೇಗಾ ಮರುಸ್ಥಾಪನೆ ಮಾಡುವವರೆಗೆ ನಿರಂತರ ಹೋರಾಟ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.</p><p>ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿಕೊಂಡು ಬಂದಿದ್ದ ಕೇವಲ ಒಂದು ಪ್ಯಾರಾವನ್ನು ಓದಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ನಿರ್ಗಮಿಸಿದ ಬೆನ್ನಲ್ಲೆ ಸುದ್ದಿಗಾರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಮಾತನಾಡಿದರು.</p><p>‘ರಾಜ್ಯಪಾಲರಿಂದ ಸಂವಿಧಾನದ ಉಲ್ಲಂಘನೆ ಆಗಿದೆ. ಜನಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ರಾಜ್ಯಪಾಲರು ಭಾಷಣ ಮಾಡಬೇಕಿರುವುದು ಸಂವಿಧಾನಬದ್ಧವಾದ ವಿಚಾರ. ಅದನ್ನು ಉಲ್ಲಂಘಿಸಿದ್ದಾರೆ. ನಮ್ಮ ಸರ್ಕಾರ, ಪಕ್ಷ, ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತಾರೆ. ಇಡೀ ರಾಜ್ಯದಲ್ಲಿ ನಾವು ಹೋರಾಟ ಹಮ್ಮಿಕೊಂಡಿದ್ದೇವೆ’ ಎಂದರು.</p>.ಸರ್ಕಾರದ ಭಾಷಣಕ್ಕೆ ಕೊಕ್; ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ.<p>‘ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ಮಾಡಿರುವ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಿಂದ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನದ ಉಲ್ಲಂಘನೆ. ಸಂವಿಧಾನಬಾಹಿರ, ಅವರು ತಮ್ಮ ಕರ್ತವ್ಯ, ಜವಾಬ್ದಾರಿಯನ್ನು ನಿರ್ವಹಿಸಿಲ್ಲ’ ಎಂದು ವಾಗ್ದಾಳಿ ನಡೆಸಿದರು.</p><p>‘ಸರ್ಕಾರ ತಯಾರಿ ಮಾಡಿದ ಭಾಷಣವನ್ನು ಎಲ್ಲ ಶಾಸಕರಿಗೆ, ಪರಿಷತ್ ಸದಸ್ಯರಿಗೆ ನೀಡಿದ್ದೇವೆ’ ಎಂದೂ ಹೇಳಿದರು.</p><p>‘ರಾಜ್ಯಪಾಲರು ಅವರು ಸಿದ್ಧಪಡಿಸಿದ ಭಾಷಣವನ್ನು ಓದುವಂತೆ ಇಲ್ಲ. ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ಅವರ ಭಾಷಣ ಮಾಡಬೇಕು’ ಎಂದರು.</p><p>‘ಕೇಂದ್ರ ಸರ್ಕಾರ ನರೇಗಾ ಕಾಯ್ದೆಯ ಬದಲು, ಹೊಸ ಕಾಯ್ದೆ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದೆ. ಇದಕ್ಕೆ ನಮ್ಮ ಪಕ್ಷ ಮತ್ತು ಸರ್ಕಾರದ ವಿರೋಧವಿದೆ. ಈ ವಿಷಯವನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. ನರೇಗಾ ಮರು ಸ್ಥಾಪನೆ ಮಾಡಬೇಕು. ಹೊಸ ಕಾಯ್ದೆಯನ್ನು ರದ್ದು ಮಾಡಬೇಕು. ನಮ್ಮ ಪಕ್ಷ ಮತ್ತು ಸರ್ಕಾರ ಈ ತೀರ್ಮಾನ ಮಾಡಿದೆ. ನರೇಗಾ ಮರುಸ್ಥಾಪನೆ ಮಾಡುವವರೆಗೆ ನಿರಂತರ ಹೋರಾಟ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>