ಬೆಂಗಳೂರು: ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ.ಗೋವಿಂದ ರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿದೆ. ಇದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞರಾದ ಪ್ರೊಪೆಸರ್ ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.