ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 2024ರ ಡಿ. 31ರ ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2023ರ ಡಿ. 31ರ ಗಡುವು ವಿಧಿಸಲಾಗಿತ್ತು.
ಈ ಉದ್ದೇಶದಿಂದ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು– 2012ರ ತಿದ್ದುಪಡಿಗೆ ಕರಡು ನಿಯಮವನ್ನು ಡಿಪಿಎಆರ್ ಪ್ರಕಟಿಸಿದೆ. ಈ ನಿಯಮಕ್ಕೆ ಆಕ್ಷೇಪಣೆ ಸಲ್ಲಿಸಲು ಬಯಸುವವರು 15 ದಿನಗಳ ಒಳಗೆ ಡಿಪಿಎಆರ್ ಕಾರ್ಯದರ್ಶಿಗೆ ಸಲ್ಲಿಸಬಹುದು ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.