ಕಾರವಾರ: ರಾಜ್ಯದಲ್ಲಿ ‘ಕೌಶಲ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಕುರಿತು ಟಾಟಾ ಶೈಕ್ಷಣಿಕ ಸಮೂಹ ಸಂಸ್ಥೆಯ ಸಹಕಾರ ಪಡೆಯಲೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.