<p><strong>ಬೆಂಗಳೂರು:</strong> ಆಡಳಿತಾತ್ಮಕ ವೆಚ್ಚ, ನಿರ್ವಹಣಾ ವೆಚ್ಚ ಮತ್ತು ಖಾಸಗಿ ಭೂಮಾಪಕರ ಸೇವಾ ಶುಲ್ಕದ ಹೆಚ್ಚಳದ ಹೊರೆಯನ್ನು ಜಮೀನುಗಳ ಮಾಲೀಕರಿಗೆ ವರ್ಗಾಯಿಸಿರುವ ಕಂದಾಯ ಇಲಾಖೆ, ಭೂಮಾಪನ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದೆ. ಫೆಬ್ರುವರಿ 1ರಿಂದಲೇ ಪರಿಷ್ಕೃತ ದರ ಜಾರಿಯಾಗಿದ್ದು, ಶುಲ್ಕದಲ್ಲಿ ಹತ್ತು ಪಟ್ಟಿನಿಂದ ನೂರು ಪಟ್ಟಿನಷ್ಟು ಏರಿಕೆ ಮಾಡಲಾಗಿದೆ.</p>.<p>11–ಇ ನಕ್ಷೆ, ಭೂ ಪರಿವರ್ತನೆ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಅರ್ಜಿಗಳ ಶುಲ್ಕದಲ್ಲಿ ಹೆಚ್ಚಳ ಮಾಡಿ 2021ರ ಡಿಸೆಂಬರ್ 23ರಂದು ಆದೇಶ ಹೊರಡಿಸಲಾಗಿತ್ತು. ಹದ್ದುಬಸ್ತು ಪ್ರಕ್ರಿಯೆಯ ಭೂಮಾಪನ ಶುಲ್ಕದಲ್ಲೂ ಹೆಚ್ಚಳ ಮಾಡಿ 2022ರ ಜನವರಿ 19ರಂದು ಆದೇಶ ಹೊರಡಿಸಲಾಗಿದೆ.</p>.<p>11– ಇ ನಕ್ಷೆ, ಭೂ ಪರಿವರ್ತನೆ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಭೂಮಾಪನ ಶುಲ್ಕವನ್ನು 2014ರಲ್ಲಿ ಪರಿಷ್ಕರಿಸಲಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆಗೆ ₹ 1,200 ಮತ್ತು ನಂತರದ ಪ್ರತಿ ಎಕರೆಗೆ ತಲಾ ₹ 100ರಂತೆ ಗರಿಷ್ಠ ₹ 2,500 ನಿಗದಿಪಡಿಸಲಾಗಿತ್ತು. ನಗರ ಪ್ರದೇಶದಲ್ಲಿ ಒಂದು ಸರ್ವೆ ನಂಬರ್ಗೆ ₹ 1,200 ನಂತರದ ಪ್ರತಿ ಹೆಚ್ಚುವರಿ ಸರ್ವೆ ನಂಬರ್ಗೆ ತಲಾ ₹ 200 ಶುಲ್ಕ ನಿಗದಿಪಡಿಸಲಾಗಿತ್ತು.</p>.<p>ಈ ಶುಲ್ಕವನ್ನು ಪರಿಷ್ಕರಣೆ ಮಾಡಿರುವ ಕಂದಾಯ ಇಲಾಖೆ, ಎರಡು ಎಕರೆಗೆ ₹ 2,000 ಹಾಗೂ ನಂತರದ ಪ್ರತಿ ಎಕರೆಗೆ ₹ 400ರಂತೆ ಗರಿಷ್ಠ 4,000ದವರೆಗೂ ಶುಲ್ಕ ವಿಧಿಸಲು ಅವಕಾಶ ಕಲ್ಪಿಸಿದೆ. ನಗರ ಪ್ರದೇಶದಲ್ಲಿ ಎರಡು ಎಕರೆವರೆಗೂ ₹ 2,500 ಮತ್ತು ನಂತರದ ಪ್ರತಿ ಎಕರೆಗೆ ₹ 1,000ದಂತೆ ಗರಿಷ್ಠ ₹ 5,000ದವರೆಗೂ ಶುಲ್ಕ ವಿಧಿಸಲು ಅನುಮತಿ ನೀಡಲಾಗಿದೆ.</p>.<p><strong>ಹದ್ದುಬಸ್ತು ದುಬಾರಿ:</strong></p>.<p>ತಿಂಗಳು ಕಳೆಯುವಷ್ಟರಲ್ಲೇ ಹದ್ದುಬಸ್ತು ಭೂಮಾಪನ ಕೋರಿ ಸಲ್ಲಿಕೆಯಾಗುವ ಅರ್ಜಿಗಳ ಶುಲ್ಕವನ್ನೂ ಏರಿಕೆ ಮಾಡಲಾಗಿದೆ. ಈವರೆಗೆ ಹದ್ದುಬಸ್ತು ಭೂಮಾಪನ ಅರ್ಜಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ₹ 35 ಅರ್ಜಿ ಶುಲ್ಕ ಮತ್ತು ಪ್ರತಿ ಬಾಜುದಾರರಿಗೆ ನೋಟಿಸ್ ನೀಡಲು ₹ 25 ಶುಲ್ಕ ಇತ್ತು.</p>.<p>ಈಗ ಹದ್ದುಬಸ್ತು ಭೂಮಾಪನಕ್ಕೆ ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ₹ 3,000 ಮತ್ತು ನಗರ ಪ್ರದೇಶಗಳಲ್ಲಿ ಗರಿಷ್ಠ ₹ 4,000ದವರೆಗೂ ಶುಲ್ಕ ಏರಿಕೆ ಮಾಡಲಾಗಿದೆ. ಬಾಜುದಾರರಿಗೆ ನೋಟಿಸ್ ನೀಡಲು ವಿಧಿಸುವ ಶುಲ್ಕದಲ್ಲಿ ಮಾತ್ರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.</p>.<p><strong>ಶುಲ್ಕ ಏರಿಕೆ ಹಿಂಪಡೆಯಲು ಆಗ್ರಹ</strong></p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರಿಗೆ ಪತ್ರ ಬರೆದಿರುವ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ, ಭೂಮಾಪನ ಶುಲ್ಕದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.</p>.<p>‘ಕೋವಿಡ್ನಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈ ಸ್ಥಿತಿಯಲ್ಲಿ ಭೂಮಾಪನ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿರುವುದು ಸರಿಯಲ್ಲ. ರೈತರು ಮತ್ತು ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಈ ಆದೇಶವನ್ನು ತಕ್ಷಣ ರದ್ದು ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಡಳಿತಾತ್ಮಕ ವೆಚ್ಚ, ನಿರ್ವಹಣಾ ವೆಚ್ಚ ಮತ್ತು ಖಾಸಗಿ ಭೂಮಾಪಕರ ಸೇವಾ ಶುಲ್ಕದ ಹೆಚ್ಚಳದ ಹೊರೆಯನ್ನು ಜಮೀನುಗಳ ಮಾಲೀಕರಿಗೆ ವರ್ಗಾಯಿಸಿರುವ ಕಂದಾಯ ಇಲಾಖೆ, ಭೂಮಾಪನ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದೆ. ಫೆಬ್ರುವರಿ 1ರಿಂದಲೇ ಪರಿಷ್ಕೃತ ದರ ಜಾರಿಯಾಗಿದ್ದು, ಶುಲ್ಕದಲ್ಲಿ ಹತ್ತು ಪಟ್ಟಿನಿಂದ ನೂರು ಪಟ್ಟಿನಷ್ಟು ಏರಿಕೆ ಮಾಡಲಾಗಿದೆ.</p>.<p>11–ಇ ನಕ್ಷೆ, ಭೂ ಪರಿವರ್ತನೆ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಅರ್ಜಿಗಳ ಶುಲ್ಕದಲ್ಲಿ ಹೆಚ್ಚಳ ಮಾಡಿ 2021ರ ಡಿಸೆಂಬರ್ 23ರಂದು ಆದೇಶ ಹೊರಡಿಸಲಾಗಿತ್ತು. ಹದ್ದುಬಸ್ತು ಪ್ರಕ್ರಿಯೆಯ ಭೂಮಾಪನ ಶುಲ್ಕದಲ್ಲೂ ಹೆಚ್ಚಳ ಮಾಡಿ 2022ರ ಜನವರಿ 19ರಂದು ಆದೇಶ ಹೊರಡಿಸಲಾಗಿದೆ.</p>.<p>11– ಇ ನಕ್ಷೆ, ಭೂ ಪರಿವರ್ತನೆ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಭೂಮಾಪನ ಶುಲ್ಕವನ್ನು 2014ರಲ್ಲಿ ಪರಿಷ್ಕರಿಸಲಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆಗೆ ₹ 1,200 ಮತ್ತು ನಂತರದ ಪ್ರತಿ ಎಕರೆಗೆ ತಲಾ ₹ 100ರಂತೆ ಗರಿಷ್ಠ ₹ 2,500 ನಿಗದಿಪಡಿಸಲಾಗಿತ್ತು. ನಗರ ಪ್ರದೇಶದಲ್ಲಿ ಒಂದು ಸರ್ವೆ ನಂಬರ್ಗೆ ₹ 1,200 ನಂತರದ ಪ್ರತಿ ಹೆಚ್ಚುವರಿ ಸರ್ವೆ ನಂಬರ್ಗೆ ತಲಾ ₹ 200 ಶುಲ್ಕ ನಿಗದಿಪಡಿಸಲಾಗಿತ್ತು.</p>.<p>ಈ ಶುಲ್ಕವನ್ನು ಪರಿಷ್ಕರಣೆ ಮಾಡಿರುವ ಕಂದಾಯ ಇಲಾಖೆ, ಎರಡು ಎಕರೆಗೆ ₹ 2,000 ಹಾಗೂ ನಂತರದ ಪ್ರತಿ ಎಕರೆಗೆ ₹ 400ರಂತೆ ಗರಿಷ್ಠ 4,000ದವರೆಗೂ ಶುಲ್ಕ ವಿಧಿಸಲು ಅವಕಾಶ ಕಲ್ಪಿಸಿದೆ. ನಗರ ಪ್ರದೇಶದಲ್ಲಿ ಎರಡು ಎಕರೆವರೆಗೂ ₹ 2,500 ಮತ್ತು ನಂತರದ ಪ್ರತಿ ಎಕರೆಗೆ ₹ 1,000ದಂತೆ ಗರಿಷ್ಠ ₹ 5,000ದವರೆಗೂ ಶುಲ್ಕ ವಿಧಿಸಲು ಅನುಮತಿ ನೀಡಲಾಗಿದೆ.</p>.<p><strong>ಹದ್ದುಬಸ್ತು ದುಬಾರಿ:</strong></p>.<p>ತಿಂಗಳು ಕಳೆಯುವಷ್ಟರಲ್ಲೇ ಹದ್ದುಬಸ್ತು ಭೂಮಾಪನ ಕೋರಿ ಸಲ್ಲಿಕೆಯಾಗುವ ಅರ್ಜಿಗಳ ಶುಲ್ಕವನ್ನೂ ಏರಿಕೆ ಮಾಡಲಾಗಿದೆ. ಈವರೆಗೆ ಹದ್ದುಬಸ್ತು ಭೂಮಾಪನ ಅರ್ಜಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ₹ 35 ಅರ್ಜಿ ಶುಲ್ಕ ಮತ್ತು ಪ್ರತಿ ಬಾಜುದಾರರಿಗೆ ನೋಟಿಸ್ ನೀಡಲು ₹ 25 ಶುಲ್ಕ ಇತ್ತು.</p>.<p>ಈಗ ಹದ್ದುಬಸ್ತು ಭೂಮಾಪನಕ್ಕೆ ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ₹ 3,000 ಮತ್ತು ನಗರ ಪ್ರದೇಶಗಳಲ್ಲಿ ಗರಿಷ್ಠ ₹ 4,000ದವರೆಗೂ ಶುಲ್ಕ ಏರಿಕೆ ಮಾಡಲಾಗಿದೆ. ಬಾಜುದಾರರಿಗೆ ನೋಟಿಸ್ ನೀಡಲು ವಿಧಿಸುವ ಶುಲ್ಕದಲ್ಲಿ ಮಾತ್ರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.</p>.<p><strong>ಶುಲ್ಕ ಏರಿಕೆ ಹಿಂಪಡೆಯಲು ಆಗ್ರಹ</strong></p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರಿಗೆ ಪತ್ರ ಬರೆದಿರುವ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ, ಭೂಮಾಪನ ಶುಲ್ಕದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.</p>.<p>‘ಕೋವಿಡ್ನಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈ ಸ್ಥಿತಿಯಲ್ಲಿ ಭೂಮಾಪನ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿರುವುದು ಸರಿಯಲ್ಲ. ರೈತರು ಮತ್ತು ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಈ ಆದೇಶವನ್ನು ತಕ್ಷಣ ರದ್ದು ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>