<p><strong>ಬೆಂಗಳೂರು</strong>: ಬರ ಕಾರಣ ಬೆಳೆ ನಷ್ಟ, ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳ ಸಂರಕ್ಷಣೆ ಮತ್ತಿತರ ಪರಿಹಾರ ಕಾರ್ಯಗಳಿಗಾಗಿ ಕೇಂದ್ರದಿಂದ ₹17,901.73 ಕೋಟಿ ನೆರವು ಕೋರಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>ಸಚಿವ ಸಂಪುಟ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಒಟ್ಟು ₹33,770.10 ಕೋಟಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಸ್ಥಿತಿ ವಿವರಿಸಲು ಸಮಯ ಕೇಳುತ್ತಿದ್ದೇವೆ. ಈವರೆಗೆ ಸಮಯ ನೀಡಿಲ್ಲ. ಈ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಯಿತು ಎಂದರು.</p>.<p>195 ತಾಲ್ಲೂಕುಗಳಲ್ಲದೇ ಹೆಚ್ಚುವರಿಯಾಗಿ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಒಪ್ಪಿಗೆ ನೀಡಿತು ಎಂದರು.</p>.<p>ರಸಗೊಬ್ಬರ ಬಫರ್ ಸ್ಟಾಕ್ ದಾಸ್ತಾನು ಮಾಡಲು ಕರ್ನಾಟಕ ಸಹಕಾರ ಮಾರಾಟ ಮಂಡಳಿಗೆ ₹200 ಕೋಟಿ ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತಕ್ಕೆ ₹200 ಕೋಟಿ ಸಾಲದ ಮೊತ್ತಕ್ಕೆ ಗ್ಯಾರಂಟಿ ನೀಡಲು ಸಂಪುಟ ಒಪ್ಪಿಗೆ ನೀಡಿತು.</p>.<p>ಸಚಿವರ ವೇತನ ಹೆಚ್ಚಿಸುವ ಸಂಬಂಧ ಘಟನೋತ್ತರ ಮಂಜೂರಾತಿ ನೀಡಲಾಯಿತು. ಕಳೆದ ಅಧಿವೇಶನದಲ್ಲಿ ವೇತನ ಹೆಚ್ಚಳ ಸಂಬಂಧ ಮಸೂದೆಗೆ ಅಂಗೀಕಾರ ನೀಡಲಾಗಿತ್ತು ಎಂದು ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬರ ಕಾರಣ ಬೆಳೆ ನಷ್ಟ, ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳ ಸಂರಕ್ಷಣೆ ಮತ್ತಿತರ ಪರಿಹಾರ ಕಾರ್ಯಗಳಿಗಾಗಿ ಕೇಂದ್ರದಿಂದ ₹17,901.73 ಕೋಟಿ ನೆರವು ಕೋರಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>ಸಚಿವ ಸಂಪುಟ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಒಟ್ಟು ₹33,770.10 ಕೋಟಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಸ್ಥಿತಿ ವಿವರಿಸಲು ಸಮಯ ಕೇಳುತ್ತಿದ್ದೇವೆ. ಈವರೆಗೆ ಸಮಯ ನೀಡಿಲ್ಲ. ಈ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಯಿತು ಎಂದರು.</p>.<p>195 ತಾಲ್ಲೂಕುಗಳಲ್ಲದೇ ಹೆಚ್ಚುವರಿಯಾಗಿ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಒಪ್ಪಿಗೆ ನೀಡಿತು ಎಂದರು.</p>.<p>ರಸಗೊಬ್ಬರ ಬಫರ್ ಸ್ಟಾಕ್ ದಾಸ್ತಾನು ಮಾಡಲು ಕರ್ನಾಟಕ ಸಹಕಾರ ಮಾರಾಟ ಮಂಡಳಿಗೆ ₹200 ಕೋಟಿ ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತಕ್ಕೆ ₹200 ಕೋಟಿ ಸಾಲದ ಮೊತ್ತಕ್ಕೆ ಗ್ಯಾರಂಟಿ ನೀಡಲು ಸಂಪುಟ ಒಪ್ಪಿಗೆ ನೀಡಿತು.</p>.<p>ಸಚಿವರ ವೇತನ ಹೆಚ್ಚಿಸುವ ಸಂಬಂಧ ಘಟನೋತ್ತರ ಮಂಜೂರಾತಿ ನೀಡಲಾಯಿತು. ಕಳೆದ ಅಧಿವೇಶನದಲ್ಲಿ ವೇತನ ಹೆಚ್ಚಳ ಸಂಬಂಧ ಮಸೂದೆಗೆ ಅಂಗೀಕಾರ ನೀಡಲಾಗಿತ್ತು ಎಂದು ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>