<p><strong>ನವದೆಹಲಿ</strong> : ದೇಶದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪಿಂಚಣಿ ನೀಡಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಯಡಿ (ಪಿಎಂಕೆಎಂವೈ) ಇಲ್ಲಿಯವರೆಗೆ 23.30 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ.</p>.<p>‘2019ರ ಸೆಪ್ಟೆಂಬರ್ನಲ್ಲಿ ಈ ಯೋಜನೆಯು ಅನುಷ್ಠಾನಗೊಂಡಿದೆ. 18ರಿಂದ 40 ವರ್ಷದ ಒಳಗಿನ ರೈತರು ಸೌಲಭ್ಯಕ್ಕೆ ಅರ್ಹರಿರುತ್ತಾರೆ. 60 ವರ್ಷದ ಬಳಿಕ ಅವರಿಗೆ ಮಾಸಿಕ ₹3 ಸಾವಿರ ಪಿಂಚಣಿ ಸಿಗಲಿದೆ’ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.</p>.<p>‘ಯೋಜನೆಯಡಿ ಇಲ್ಲಿಯವರೆಗೆ ಕರ್ನಾಟಕದಲ್ಲಿ 41,683 ರೈತರು ಹೆಸರು ನೋಂದಾಯಿಸಿದ್ದಾರೆ. ಪ್ರಸಕ್ತ ವರ್ಷದ ಜನವರಿ 31ರ ವರೆಗೆ ಈ ರೈತರು ₹10.78 ಕೋಟಿ ವಂತಿಗೆ ಪಾವತಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>ವಯಸ್ಸಿನ ಆಧಾರದ ಮೇಲೆ ಫಲಾನುಭವಿಗಳು ಮಾಸಿಕವಾಗಿ ₹55ರಿಂದ ₹ 200 ವಂತಿಗೆ ಕಟ್ಟಬೇಕಿದೆ. ರೈತರು ಪಾವತಿಸಿದ ಮೊತ್ತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಸಮಾನ ಮೊತ್ತವನ್ನು ಪಿಂಚಣಿ ನಿಧಿಗೆ ಪಾವತಿ ಮಾಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ದೇಶದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪಿಂಚಣಿ ನೀಡಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಯಡಿ (ಪಿಎಂಕೆಎಂವೈ) ಇಲ್ಲಿಯವರೆಗೆ 23.30 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ.</p>.<p>‘2019ರ ಸೆಪ್ಟೆಂಬರ್ನಲ್ಲಿ ಈ ಯೋಜನೆಯು ಅನುಷ್ಠಾನಗೊಂಡಿದೆ. 18ರಿಂದ 40 ವರ್ಷದ ಒಳಗಿನ ರೈತರು ಸೌಲಭ್ಯಕ್ಕೆ ಅರ್ಹರಿರುತ್ತಾರೆ. 60 ವರ್ಷದ ಬಳಿಕ ಅವರಿಗೆ ಮಾಸಿಕ ₹3 ಸಾವಿರ ಪಿಂಚಣಿ ಸಿಗಲಿದೆ’ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.</p>.<p>‘ಯೋಜನೆಯಡಿ ಇಲ್ಲಿಯವರೆಗೆ ಕರ್ನಾಟಕದಲ್ಲಿ 41,683 ರೈತರು ಹೆಸರು ನೋಂದಾಯಿಸಿದ್ದಾರೆ. ಪ್ರಸಕ್ತ ವರ್ಷದ ಜನವರಿ 31ರ ವರೆಗೆ ಈ ರೈತರು ₹10.78 ಕೋಟಿ ವಂತಿಗೆ ಪಾವತಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>ವಯಸ್ಸಿನ ಆಧಾರದ ಮೇಲೆ ಫಲಾನುಭವಿಗಳು ಮಾಸಿಕವಾಗಿ ₹55ರಿಂದ ₹ 200 ವಂತಿಗೆ ಕಟ್ಟಬೇಕಿದೆ. ರೈತರು ಪಾವತಿಸಿದ ಮೊತ್ತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಸಮಾನ ಮೊತ್ತವನ್ನು ಪಿಂಚಣಿ ನಿಧಿಗೆ ಪಾವತಿ ಮಾಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>