ಬುಧವಾರ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಅವರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ‘ಈಗ ₹ 53 ಲಕ್ಷ ಅನುದಾನವನ್ನು ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗದ ಕುರಿತ ಸಂಶೋಧನೆಗೆ ಒದಗಿಸಲಾಗಿದೆ. ಇನ್ನು ಅಗತ್ಯವಿರುವ ಪೂರ್ಣ ಪ್ರಮಾಣದ ಅನುದಾನ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದರು.