<p><strong>ಬೆಂಗಳೂರು</strong>: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಾದ ಮಂಡಿಸಲು ವಕೀಲ ಶ್ರೀಶೈಲ ವಡವಡಗಿ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಗೃಹ ಇಲಾಖೆ ನೇಮಕ ಮಾಡಿದೆ.</p>.<p>ಈ ಸಂಬಂಧ ಇಲಾಖೆ ಹೊರಡಿಸಿರುವ ಆದೇಶದ ಪ್ರತಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಟಿ.ಎಂ.ನರೇಂದ್ರ ಅವರು 70ನೇ ಸಿಸಿಎಚ್ ನ್ಯಾಯಾಲಯಕ್ಕೆ ಶನಿವಾರ ಸಲ್ಲಿಸಿದರು.</p>.<p>ವಡವಡಗಿ ಅವರು ನಿವೃತ್ತ ಪಬ್ಲಿಕ್ ಪ್ರಾಸಿಕ್ಯೂಟರ್. ಬಿಡದಿಯ ಧ್ಯಾನಪೀಠದ ಭಕ್ತೆಯ ಮೇಲಿನ ಅತ್ಯಾಚಾರ ಸೇರಿದಂತೆ ಸಿಐಡಿಯ ಹಲವು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<p class="Subhead">ಸಾಕ್ಷ್ಯ ನಾಶಕ್ಕೆ ಯತ್ನ: ಆರೋಪಿ ಕೆ.ಟಿ.ನವೀನ್ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಶನಿವಾರ ಕೈಗೆತ್ತಿಕೊಂಡಿತ್ತು.</p>.<p>ವಿಶೇಷ ಪ್ರಾಸಿಕ್ಯೂಟರ್ಟಿ.ಎಂ.ನರೇಂದ್ರ, ‘ನ್ಯಾಯಾಂಗ ಬಂಧನದಲ್ಲಿರುವ ನವೀನ್ಕುಮಾರ್, ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಸಾಕ್ಷ್ಯ ನಾಶಕ್ಕೂ ಪ್ರಯತ್ನಿಸುತ್ತಿದ್ದಾರೆ. ಆತನಿಗೆ ಜಾಮೀನು ನೀಡಬಾರದು’ ಎಂದು ಕೋರಿದರು.</p>.<p>ಅದನ್ನು ಆಲಿಸಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಾದ ಮಂಡಿಸಲು ವಕೀಲ ಶ್ರೀಶೈಲ ವಡವಡಗಿ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಗೃಹ ಇಲಾಖೆ ನೇಮಕ ಮಾಡಿದೆ.</p>.<p>ಈ ಸಂಬಂಧ ಇಲಾಖೆ ಹೊರಡಿಸಿರುವ ಆದೇಶದ ಪ್ರತಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಟಿ.ಎಂ.ನರೇಂದ್ರ ಅವರು 70ನೇ ಸಿಸಿಎಚ್ ನ್ಯಾಯಾಲಯಕ್ಕೆ ಶನಿವಾರ ಸಲ್ಲಿಸಿದರು.</p>.<p>ವಡವಡಗಿ ಅವರು ನಿವೃತ್ತ ಪಬ್ಲಿಕ್ ಪ್ರಾಸಿಕ್ಯೂಟರ್. ಬಿಡದಿಯ ಧ್ಯಾನಪೀಠದ ಭಕ್ತೆಯ ಮೇಲಿನ ಅತ್ಯಾಚಾರ ಸೇರಿದಂತೆ ಸಿಐಡಿಯ ಹಲವು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<p class="Subhead">ಸಾಕ್ಷ್ಯ ನಾಶಕ್ಕೆ ಯತ್ನ: ಆರೋಪಿ ಕೆ.ಟಿ.ನವೀನ್ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಶನಿವಾರ ಕೈಗೆತ್ತಿಕೊಂಡಿತ್ತು.</p>.<p>ವಿಶೇಷ ಪ್ರಾಸಿಕ್ಯೂಟರ್ಟಿ.ಎಂ.ನರೇಂದ್ರ, ‘ನ್ಯಾಯಾಂಗ ಬಂಧನದಲ್ಲಿರುವ ನವೀನ್ಕುಮಾರ್, ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಸಾಕ್ಷ್ಯ ನಾಶಕ್ಕೂ ಪ್ರಯತ್ನಿಸುತ್ತಿದ್ದಾರೆ. ಆತನಿಗೆ ಜಾಮೀನು ನೀಡಬಾರದು’ ಎಂದು ಕೋರಿದರು.</p>.<p>ಅದನ್ನು ಆಲಿಸಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>