<p><strong>ಚಿತ್ರದುರ್ಗ:</strong> ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದ ನಾಲ್ಕು ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಗ್ರಾಮದ ಮುಖಂಡರು ಸಭೆ ನಡೆಸಿ ನಾಲ್ಕು ಸ್ಥಾನಗಳನ್ನು ಹರಾಜು ಮಾಡಲಾಗಿದೆ. ಮೂರು ಸ್ಥಾನಗಳು ತಲಾ ₹3.5 ಲಕ್ಷಕ್ಕೆ ಹಾಗೂ ತೀವ್ರ ಸ್ಪರ್ಧೆ ಇದ್ದ ಒಂದು ಸ್ಥಾನ ₹7 ಲಕ್ಷಕ್ಕೆ ಹರಾಜಾಗಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನದ ಆಕಾಂಕ್ಷಿಗಳಾದ ಭೀಮಣ್ಣ, ಬೊಮ್ಮಜ್ಜ, ಲಕ್ಷ್ಮೀದೇವಿ, ಶಾಂತಮ್ಮ ಅವರ ಅವಿರೋಧ ಆಯ್ಕೆಗೆ ಗ್ರಾಮಸ್ಥರು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮದ ದೇಗುಲದ ಮುಂಭಾಗದಲ್ಲಿ ಸಭೆ ನಡೆದಿದೆ. ಈ ಬಗ್ಗೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.</p>.<p>‘ಹರಾಜು ಪ್ರಕ್ರಿಯೆ ಇನ್ನೂ ಖಚಿತವಾಗಿಲ್ಲ. ಸೆಕ್ಟರ್ ಅಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದೇನೆ. ಅವರು ನೀಡುವ ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗೆ ರವಾನೆ ಮಾಡಲಾಗುವುದು’ ಎಂದು ಚಳ್ಳಕೆರೆ ತಹಶೀಲ್ದಾರ್ ಮಲ್ಲಿಕಾರ್ಜುನಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದ ನಾಲ್ಕು ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಗ್ರಾಮದ ಮುಖಂಡರು ಸಭೆ ನಡೆಸಿ ನಾಲ್ಕು ಸ್ಥಾನಗಳನ್ನು ಹರಾಜು ಮಾಡಲಾಗಿದೆ. ಮೂರು ಸ್ಥಾನಗಳು ತಲಾ ₹3.5 ಲಕ್ಷಕ್ಕೆ ಹಾಗೂ ತೀವ್ರ ಸ್ಪರ್ಧೆ ಇದ್ದ ಒಂದು ಸ್ಥಾನ ₹7 ಲಕ್ಷಕ್ಕೆ ಹರಾಜಾಗಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನದ ಆಕಾಂಕ್ಷಿಗಳಾದ ಭೀಮಣ್ಣ, ಬೊಮ್ಮಜ್ಜ, ಲಕ್ಷ್ಮೀದೇವಿ, ಶಾಂತಮ್ಮ ಅವರ ಅವಿರೋಧ ಆಯ್ಕೆಗೆ ಗ್ರಾಮಸ್ಥರು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮದ ದೇಗುಲದ ಮುಂಭಾಗದಲ್ಲಿ ಸಭೆ ನಡೆದಿದೆ. ಈ ಬಗ್ಗೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.</p>.<p>‘ಹರಾಜು ಪ್ರಕ್ರಿಯೆ ಇನ್ನೂ ಖಚಿತವಾಗಿಲ್ಲ. ಸೆಕ್ಟರ್ ಅಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದೇನೆ. ಅವರು ನೀಡುವ ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗೆ ರವಾನೆ ಮಾಡಲಾಗುವುದು’ ಎಂದು ಚಳ್ಳಕೆರೆ ತಹಶೀಲ್ದಾರ್ ಮಲ್ಲಿಕಾರ್ಜುನಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>