<p><strong>ಬೆಂಗಳೂರು:</strong> ಬೆಂಗಳೂರಿಗೆ ಮಾರಕವಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.</p><p>ಬಿಜೆಪಿ ಶಾಸಕರ ಜತೆಗೂಡಿ ಜಿಬಿಎ ಮೊದಲ ಸಭೆಯನ್ನು ಬಹಿಷ್ಕರಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಈಗಾಗಲೇ ಕೌನ್ಸಿಲ್ನಲ್ಲಿ ಹೋರಾಟ ಮಾಡಿದ್ದೇವೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಹಾಕಿದ್ದೇವೆ’ ಎಂದರು.</p><p>‘ಇದು ಬೆಂಗಳೂರು ಜನಪ್ರತಿನಿಧಿಗಳ ಕತ್ತು ಹಿಸುಕುವ ಮತ್ತು ಕಾನೂನು ಬಾಹಿರ ಕ್ರಮವಾಗಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿರುವುದರಿಂದ, ಇಂತಹ ಸಭೆಗೆ ಹೋಗಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಯವರಿಗೆ ನೀಡಲಾಗಿದೆ. ಕೌನ್ಸಿಲ್ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ’ ಎಂದರು.</p>.<p>ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸೃಷ್ಟಿಸಿರುವ ಜಿಬಿಎ ಸಂಪೂರ್ಣವಾಗಿ ಸ್ಥಳೀಯ ಸಂಸ್ಥೆಗಳ ಅಧಿಕಾರ ಕಿತ್ತುಕೊಳ್ಳುವ ಪ್ರಾಧಿಕಾರವಾಗಿದೆ ಎಂದು ದೂರಿದರು.</p>.<p>ಬಿಬಿಎಂಪಿ ಅಡಿಯಲ್ಲಿ ಚುನಾವಣೆ ಮಾಡಿದ್ದರೆ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ಜಿಬಿಎ ಮಾಡಿದ್ದಾರೆ. ಐದು ಪಾಲಿಕೆಗಳಲ್ಲಿ ಕನಿಷ್ಠ ಒಂದೆರಡಾದರೂ ಗೆಲ್ಲಬೇಕು ಎಂಬುದೇ ಅವರ ಉದ್ದೇಶ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿಗೆ ಮಾರಕವಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.</p><p>ಬಿಜೆಪಿ ಶಾಸಕರ ಜತೆಗೂಡಿ ಜಿಬಿಎ ಮೊದಲ ಸಭೆಯನ್ನು ಬಹಿಷ್ಕರಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಈಗಾಗಲೇ ಕೌನ್ಸಿಲ್ನಲ್ಲಿ ಹೋರಾಟ ಮಾಡಿದ್ದೇವೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಹಾಕಿದ್ದೇವೆ’ ಎಂದರು.</p><p>‘ಇದು ಬೆಂಗಳೂರು ಜನಪ್ರತಿನಿಧಿಗಳ ಕತ್ತು ಹಿಸುಕುವ ಮತ್ತು ಕಾನೂನು ಬಾಹಿರ ಕ್ರಮವಾಗಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿರುವುದರಿಂದ, ಇಂತಹ ಸಭೆಗೆ ಹೋಗಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಯವರಿಗೆ ನೀಡಲಾಗಿದೆ. ಕೌನ್ಸಿಲ್ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ’ ಎಂದರು.</p>.<p>ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸೃಷ್ಟಿಸಿರುವ ಜಿಬಿಎ ಸಂಪೂರ್ಣವಾಗಿ ಸ್ಥಳೀಯ ಸಂಸ್ಥೆಗಳ ಅಧಿಕಾರ ಕಿತ್ತುಕೊಳ್ಳುವ ಪ್ರಾಧಿಕಾರವಾಗಿದೆ ಎಂದು ದೂರಿದರು.</p>.<p>ಬಿಬಿಎಂಪಿ ಅಡಿಯಲ್ಲಿ ಚುನಾವಣೆ ಮಾಡಿದ್ದರೆ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ಜಿಬಿಎ ಮಾಡಿದ್ದಾರೆ. ಐದು ಪಾಲಿಕೆಗಳಲ್ಲಿ ಕನಿಷ್ಠ ಒಂದೆರಡಾದರೂ ಗೆಲ್ಲಬೇಕು ಎಂಬುದೇ ಅವರ ಉದ್ದೇಶ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>