<p><strong>ಬೆಂಗಳೂರು: </strong>ಲೀಡರ್ಷಿಪ್ ಇನ್ ಎನರ್ಜಿ ಆ್ಯಂಡ್ ಎನ್ವಿರಾನ್ಮೆಂಟ್ ಡಿಸೈನ್ನಲ್ಲಿ (ಎಲ್ಇಇಡಿ) ಭಾರತದ ಅಗ್ರಮಾನ್ಯ 10 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಅತ್ಯುತ್ತಮ ರಾಜ್ಯವಾಗಿ ಹೊರ ಹೊಮ್ಮಿದೆ.</p>.<p>ಜಿಬಿಸಿಐ ಇಂಡಿಯಾ (ಗ್ರೀನ್ ಬ್ಯುಸಿನೆಸ್ ಸರ್ಟಿಫಿಕೇಶನ್ ಇಂಕ್) ಈ ಪಟ್ಟಿ ಬಿಡುಗಡೆ ಮಾಡಿದೆ.</p>.<p>ಈ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿ ಹಾಗೂ ಹರಿಯಾಣ ಮೂರನೇ ಸ್ಥಾನದಲ್ಲಿವೆ. ನಂತರದ ಸ್ಥಾನಗಳಲ್ಲಿ ಕ್ರಮವಾಗಿ ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ, ದೆಹಲಿ, ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನಗಳಿವೆ.</p>.<p>ಅಮೆರಿಕದ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ ಆ್ಯಂಡ್ ಜಿಬಿಸಿಐನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ರಾಮಾನುಜಂ, ‘ಹಸಿರು ಕಟ್ಟಡಗಳ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ’ ಎಂದು ಅವರು ಹೇಳಿದರು.</p>.<p>‘ಎಲ್ಇಇಡಿ ಪ್ರಮಾಣೀಕೃತಗೊಂಡ1,400 ಕಟ್ಟಡಗಳು ಭಾರತದಲ್ಲಿವೆ. ಈ ಪೈಕಿ ಶಾಲೆಗಳು, ಆಸ್ಪತ್ರೆಗಳು, ಕಚೇರಿಗಳು ಮತ್ತು ವಸತಿ ಸಮುಚ್ಛಯಗಳಿವೆ. ಈ ಕಟ್ಟಡಗಳು ಜನರಿಗೆ ಆರೋಗ್ಯಕರವಾದ ವಾತಾವರಣ ಕಲ್ಪಿಸುತ್ತವೆ. ಇದರ ಜತೆಗೆ ಇಂಧನ ಮತ್ತು ನೀರನ್ನು ಉಳಿತಾಯ ಮಾಡಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೀಡರ್ಷಿಪ್ ಇನ್ ಎನರ್ಜಿ ಆ್ಯಂಡ್ ಎನ್ವಿರಾನ್ಮೆಂಟ್ ಡಿಸೈನ್ನಲ್ಲಿ (ಎಲ್ಇಇಡಿ) ಭಾರತದ ಅಗ್ರಮಾನ್ಯ 10 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಅತ್ಯುತ್ತಮ ರಾಜ್ಯವಾಗಿ ಹೊರ ಹೊಮ್ಮಿದೆ.</p>.<p>ಜಿಬಿಸಿಐ ಇಂಡಿಯಾ (ಗ್ರೀನ್ ಬ್ಯುಸಿನೆಸ್ ಸರ್ಟಿಫಿಕೇಶನ್ ಇಂಕ್) ಈ ಪಟ್ಟಿ ಬಿಡುಗಡೆ ಮಾಡಿದೆ.</p>.<p>ಈ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿ ಹಾಗೂ ಹರಿಯಾಣ ಮೂರನೇ ಸ್ಥಾನದಲ್ಲಿವೆ. ನಂತರದ ಸ್ಥಾನಗಳಲ್ಲಿ ಕ್ರಮವಾಗಿ ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ, ದೆಹಲಿ, ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನಗಳಿವೆ.</p>.<p>ಅಮೆರಿಕದ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ ಆ್ಯಂಡ್ ಜಿಬಿಸಿಐನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ರಾಮಾನುಜಂ, ‘ಹಸಿರು ಕಟ್ಟಡಗಳ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ’ ಎಂದು ಅವರು ಹೇಳಿದರು.</p>.<p>‘ಎಲ್ಇಇಡಿ ಪ್ರಮಾಣೀಕೃತಗೊಂಡ1,400 ಕಟ್ಟಡಗಳು ಭಾರತದಲ್ಲಿವೆ. ಈ ಪೈಕಿ ಶಾಲೆಗಳು, ಆಸ್ಪತ್ರೆಗಳು, ಕಚೇರಿಗಳು ಮತ್ತು ವಸತಿ ಸಮುಚ್ಛಯಗಳಿವೆ. ಈ ಕಟ್ಟಡಗಳು ಜನರಿಗೆ ಆರೋಗ್ಯಕರವಾದ ವಾತಾವರಣ ಕಲ್ಪಿಸುತ್ತವೆ. ಇದರ ಜತೆಗೆ ಇಂಧನ ಮತ್ತು ನೀರನ್ನು ಉಳಿತಾಯ ಮಾಡಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>