ಸುಪ್ರೀಂ ಕೋರ್ಟ್ ಆದೇಶಗಳನ್ನು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಧೀನ ಅಧಿಕಾರಿಗಳ ಗಮನಕ್ಕೆ ತಂದು, ಆದೇಶ ಪಾಲಿಸಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಕಾರ್ಯಪಡೆಗಳನ್ನು ರಚಿಸಿ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು. ಹಸಿರು ಪಟಾಕಿ ಹೊರತುಪಡಿಸಿ ಇತರ ಯಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದರೆ ಗೋದಾಮು ಮುಟ್ಟಗೋಲು ಹಾಕಬೇಕು. ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದೆಮೆ ಹೂಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.