ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್. ಕಾಂತರಾಜ ಅವರ ಅವಧಿಯಲ್ಲಿ ರಾಜ್ಯದಲ್ಲಿ ನಡೆದ, ‘ಜಾತಿ ಜನಗಣತಿ’ ಎಂದೇ ಬಿಂಬಿತವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸ್ವೀಕರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ, ರಾಜಕೀಯ ವಲಯದಲ್ಲಿ ಜಾತಿ ಲೆಕ್ಕಾಚಾರಗಳ ಚರ್ಚೆ ಜೋರಾಗಿದೆ.