<p>ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ.</p>.<p>‘ಗೃಹ ಲಕ್ಷ್ಮಿ’ಯ ಇತರ ನಿಯಮಗಳು ಹೀಗಿವೆ:</p>.<ul><li><p> ಅಂತ್ಯೋದಯ, ಬಿಪಿಎಲ್ ಮತ್ತು ಎಪಿಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬರಿಗೆ ಮಾತ್ರ ಅರ್ಹತೆ</p></li><li><p>ಫಲಾನುಭವಿಗಳು ಜೂನ್ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ಪೋರ್ಟಲ್ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಆ.15ರಂದು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ</p></li><li><p>ಅರ್ಜಿದಾರರ ಸ್ವಯಂ ಘೋಷಣೆ ಆಧಾರದಲ್ಲಿ ಮಂಜೂರಾತಿ ನೀಡಲಾಗುತ್ತದೆ. ನಂತರ ಅಂಶಗಳನ್ನು ಪರಿಶೀಲಿಸಿದಾಗ, ತಪ್ಪು ಮಾಹಿತಿ ಕಂಡುಬಂದರೆ ಅಂತಹವರಿಂದ ಹಣ ವಸೂಲು ಮಾಡಲಾಗುತ್ತದೆ</p></li><li><p>ಯೋಜನೆಯ ಸೌಲಭ್ಯ ಪಡೆಯಲು ಬ್ಯಾಂಕ್ ಖಾತೆ ಹಾಗೂ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ.</p>.<p>‘ಗೃಹ ಲಕ್ಷ್ಮಿ’ಯ ಇತರ ನಿಯಮಗಳು ಹೀಗಿವೆ:</p>.<ul><li><p> ಅಂತ್ಯೋದಯ, ಬಿಪಿಎಲ್ ಮತ್ತು ಎಪಿಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬರಿಗೆ ಮಾತ್ರ ಅರ್ಹತೆ</p></li><li><p>ಫಲಾನುಭವಿಗಳು ಜೂನ್ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ಪೋರ್ಟಲ್ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಆ.15ರಂದು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ</p></li><li><p>ಅರ್ಜಿದಾರರ ಸ್ವಯಂ ಘೋಷಣೆ ಆಧಾರದಲ್ಲಿ ಮಂಜೂರಾತಿ ನೀಡಲಾಗುತ್ತದೆ. ನಂತರ ಅಂಶಗಳನ್ನು ಪರಿಶೀಲಿಸಿದಾಗ, ತಪ್ಪು ಮಾಹಿತಿ ಕಂಡುಬಂದರೆ ಅಂತಹವರಿಂದ ಹಣ ವಸೂಲು ಮಾಡಲಾಗುತ್ತದೆ</p></li><li><p>ಯೋಜನೆಯ ಸೌಲಭ್ಯ ಪಡೆಯಲು ಬ್ಯಾಂಕ್ ಖಾತೆ ಹಾಗೂ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>